ಬ್ರೇಕಿಂಗ್ ನ್ಯೂಸ್
02-03-24 07:20 pm HK News Desk ದೇಶ - ವಿದೇಶ
ನವದೆಹಲಿ, ಮಾ.2: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. 16 ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. 34 ಹಾಲಿ ಕೇಂದ್ರ ಸಚಿವರನ್ನು ಕಣಕ್ಕಿಳಿಸಿದ್ದು ಮೊದಲ ಪಟ್ಟಿಯಲ್ಲಿ ಹೆಸರು ಘೋಷಿಸಲಾಗಿದೆ.
ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ವಾರಣಾಸಿಯಿಂದ ನರೇಂದ್ರ ಮೋದಿ, ಗಾಂಧಿನಗರ-ಅಮಿತ್ ಶಾ, ರಾಜನಾಥ್ ಸಿಂಗ್-ಲಕ್ನೋ, ಗುನಾ- ಜ್ಯೋತಿರಾಧಿತ್ಯ ಸಿಂಧಿಯಾ, ವಿಧಿಶಾ- ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಲವು ಘಟಾನುಘಟಿ ನಾಯಕರ ಹೆಸರು ಘೋಷಿಸಲಾಗಿದೆ. ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ನಾಟಕ, ತಮಿಳುನಾಡು ಹಾಗೂ ಓಡಿಶಾದ ಯಾವ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿಲ್ಲ. ಹೆಚ್ಚಿನ ಕಡೆ ಹೊಸ ಮುಖಗಳಿಗೆ ಮಣೆ ಹಾಕಿದ್ದು ಹಾಲಿ ಸಂಸದರಿಗೆ ಕೊಕ್ ನೀಡಿದೆ. ಪ್ರತಿ ಕ್ಷೇತ್ರದಲ್ಲಿ ಪಕ್ಷದ ಸರ್ವೆ ಮತ್ತು ಕಾರ್ಯಕರ್ತರ ಪ್ರತಿಕ್ರಿಯೆ ಆಧರಿಸಿ ಟಿಕೆಟ್ ಹಂಚಲಾಗಿದೆ.
ಕೇರಳದಲ್ಲಿ 12 ಅಭ್ಯರ್ಥಿಗಳ ಹೆಸರು ಘೋಷಣೆ
ಉತ್ತರ ಪ್ರದೇಶ 51, ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್ 11, ಛತ್ತೀಸ್ಗಢ 6, ದೆಹಲಿ 5, ಅರುಣಾಚಲ 2, ಅಂಡಮಾನ್ ನಿಕೋಬಾರ್ 1, ದಮನ್ ದಿಯು 1, ಗೋವಾ 1, ಜಮ್ಮು ಕಾಶ್ಮೀರ 2, ತ್ರಿಪುರಾ 1, ಉತ್ತರಾಖಂಡ 3 ಸೀಟುಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟವಾಗಿವೆ. ಒಟ್ಟು 26 ಮಹಿಳೆಯರಿಗೆ ಸ್ಥಾನ ನೀಡಲಾಗಿದೆ. ಕೇರಳದ ಕಾಸರಗೋಡು ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಆಯ್ಕೆಯಾಗಿದ್ದಾರೆ. ಆಲಪ್ಪುಝ ಶೋಭಾ ಸುರೇಂದ್ರನ್, ಅಟ್ಟಿಂಗಾಲ್ ವಿ.ಮುರಲೀಧರನ್, ತಿರುವನಂತಪುರಂ ಕ್ಷೇತ್ರದಲ್ಲಿ ಹಾಲಿ ಸಚಿವ ರಾಜೀವ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಲಾಗಿದೆ. ತೃಶೂರ್ ಕ್ಷೇತ್ರದಲ್ಲಿ ಚಿತ್ರನಟ ಸುರೇಶ್ ಗೋಪಿ ಹೆಸರು ಘೋಷಣೆ ಮಾಡಲಾಗಿದೆ.
The Bharatiya Janata Party (BJP) on Saturday released the first list of candidates for the upcoming General Elections, hinting at the party's readiness for the big polls.The BJP, as anticipated, unveiled its initial roster of candidates for the 2024 Lok Sabha election, comprising more than 195 names. Notable figures such as Prime Minister Narendra Modi and 34 Union Ministers and Minister of States feature prominently in this list.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am