ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm