ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm