ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.
ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm