ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm