ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am