ಬ್ರೇಕಿಂಗ್ ನ್ಯೂಸ್
06-03-24 04:20 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮಾ.6: ದೇಶದಲ್ಲಿ ಇದೇ ಮೊದಲ ಬಾರಿಗೆ ನದಿಯ ಅಡಿಭಾಗದಲ್ಲಿ ಸುರಂಗ ಕೊರೆದು ಅದರಲ್ಲಿ ಮೆಟ್ರೋ ರೈಲನ್ನು ಸಂಚರಿಸುವಂತೆ ಮಾಡಲಾಗಿದ್ದು, ಅಪೂರ್ವ ಯೋಜನೆಯನ್ನು ಕೊಲ್ಕತ್ತಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ.
ಕೊಲ್ಕತ್ತಾ ಮತ್ತು ಹೌರಾ ನಗರವನ್ನು ಪೂರ್ವ- ಪಶ್ಚಿಮಕ್ಕೆ ಸಂಪರ್ಕಿಸುವ ಮೆಟ್ರೋ ಯೋಜನೆ ಇದಾಗಿದ್ದು, 4.8 ಕಿಮೀ ಉದ್ದಕ್ಕೆ ಸುರಂಗ ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಭಾಗದ ಆರು ಮೆಟ್ರೋ ನಿಲ್ದಾಣಗಳ ಪೈಕಿ ಮೂರು ನಿಲ್ದಾಣಗಳು ಸುರಂಗದ ಒಳಗಡೆಯೇ ಇದೆ. ಹೌರಾ ಮೈದಾನ್ ಮತ್ತು ಇಸ್ಪ್ಲಾನೇಡ್ ನಿಲ್ದಾಣಗಳ ನಡುವೆ 4.8 ಕಿಮೀ ಅಂತರ ಇದೆ. ಇದರ ನಡುವೆ 1.2 ಕಿಮೀ ಅಂತರದಲ್ಲಿ ಹೂಗ್ಲಿ ನದಿಯಿದ್ದು, ಅದರ ಅಡಿಭಾಗದಲ್ಲಿ 30 ಮೀಟರ್ ಆಳದಲ್ಲಿ ಮೆಟ್ರೋ ಸುರಂಗ ಹಾದು ಹೋಗಿದೆ.







ಪ್ರಧಾನಿ ಮೋದಿ ಈ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದಲ್ಲದೆ, ಅದೇ ರೈಲಿನಲ್ಲಿ ಮಕ್ಕಳ ಜೊತೆಗೆ ಕುಳಿತು ಸಂಚಾರ ಮಾಡಿದ್ದಾರೆ. ಶಾಲಾ ಮಕ್ಕಳ ಜೊತೆಗೆ ಕುಳಿತು ಸಂವಾದ ನಡೆಸುವ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಮೆಟ್ರೋ ಸುರಂಗ ಮಾರ್ಗವನ್ನು 4138 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ದೇಶದ ಮೊದಲ ನೀರಿನಾಳದಲ್ಲಿ ನಿರ್ಮಿಸಲ್ಪಟ್ಟ ರೈಲು ಮಾರ್ಗ ಎಂದೆನಿಸಿದೆ.
ಪ್ರಧಾನಿ ಮೋದಿ ಒಟ್ಟು 15450 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಇದೇ ಸಂದರ್ಭ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಮೋದಿ ಮೋದಿ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಅಲ್ಲದೆ, ರಸ್ತೆ ಉದ್ದಕ್ಕೂ ಸೇರಿದ್ದ ಜನರು ಮೋದಿಗೆ ಜೈಕಾರ ಹಾಕಿದ್ದಾರೆ. ಜನರನ್ನು ನೋಡಿ ಉತ್ಸಾಹಗೊಂಡ ಮೋದಿ ಕಾರಿನಲ್ಲೇ 12 ಕಿಮೀ ಉದ್ದಕ್ಕೆ ರಸ್ತೆಯಲ್ಲಿ ಸಂಚರಿಸಿದ್ದಾರೆ.
Prime Minister Narendra Modi on Wednesday inaugurated India's first underwater metro services, an engineering marvel in itself.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm