ಬ್ರೇಕಿಂಗ್ ನ್ಯೂಸ್
06-03-24 04:20 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮಾ.6: ದೇಶದಲ್ಲಿ ಇದೇ ಮೊದಲ ಬಾರಿಗೆ ನದಿಯ ಅಡಿಭಾಗದಲ್ಲಿ ಸುರಂಗ ಕೊರೆದು ಅದರಲ್ಲಿ ಮೆಟ್ರೋ ರೈಲನ್ನು ಸಂಚರಿಸುವಂತೆ ಮಾಡಲಾಗಿದ್ದು, ಅಪೂರ್ವ ಯೋಜನೆಯನ್ನು ಕೊಲ್ಕತ್ತಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ.
ಕೊಲ್ಕತ್ತಾ ಮತ್ತು ಹೌರಾ ನಗರವನ್ನು ಪೂರ್ವ- ಪಶ್ಚಿಮಕ್ಕೆ ಸಂಪರ್ಕಿಸುವ ಮೆಟ್ರೋ ಯೋಜನೆ ಇದಾಗಿದ್ದು, 4.8 ಕಿಮೀ ಉದ್ದಕ್ಕೆ ಸುರಂಗ ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಭಾಗದ ಆರು ಮೆಟ್ರೋ ನಿಲ್ದಾಣಗಳ ಪೈಕಿ ಮೂರು ನಿಲ್ದಾಣಗಳು ಸುರಂಗದ ಒಳಗಡೆಯೇ ಇದೆ. ಹೌರಾ ಮೈದಾನ್ ಮತ್ತು ಇಸ್ಪ್ಲಾನೇಡ್ ನಿಲ್ದಾಣಗಳ ನಡುವೆ 4.8 ಕಿಮೀ ಅಂತರ ಇದೆ. ಇದರ ನಡುವೆ 1.2 ಕಿಮೀ ಅಂತರದಲ್ಲಿ ಹೂಗ್ಲಿ ನದಿಯಿದ್ದು, ಅದರ ಅಡಿಭಾಗದಲ್ಲಿ 30 ಮೀಟರ್ ಆಳದಲ್ಲಿ ಮೆಟ್ರೋ ಸುರಂಗ ಹಾದು ಹೋಗಿದೆ.







ಪ್ರಧಾನಿ ಮೋದಿ ಈ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದಲ್ಲದೆ, ಅದೇ ರೈಲಿನಲ್ಲಿ ಮಕ್ಕಳ ಜೊತೆಗೆ ಕುಳಿತು ಸಂಚಾರ ಮಾಡಿದ್ದಾರೆ. ಶಾಲಾ ಮಕ್ಕಳ ಜೊತೆಗೆ ಕುಳಿತು ಸಂವಾದ ನಡೆಸುವ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಮೆಟ್ರೋ ಸುರಂಗ ಮಾರ್ಗವನ್ನು 4138 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ದೇಶದ ಮೊದಲ ನೀರಿನಾಳದಲ್ಲಿ ನಿರ್ಮಿಸಲ್ಪಟ್ಟ ರೈಲು ಮಾರ್ಗ ಎಂದೆನಿಸಿದೆ.
ಪ್ರಧಾನಿ ಮೋದಿ ಒಟ್ಟು 15450 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಇದೇ ಸಂದರ್ಭ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಮೋದಿ ಮೋದಿ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಅಲ್ಲದೆ, ರಸ್ತೆ ಉದ್ದಕ್ಕೂ ಸೇರಿದ್ದ ಜನರು ಮೋದಿಗೆ ಜೈಕಾರ ಹಾಕಿದ್ದಾರೆ. ಜನರನ್ನು ನೋಡಿ ಉತ್ಸಾಹಗೊಂಡ ಮೋದಿ ಕಾರಿನಲ್ಲೇ 12 ಕಿಮೀ ಉದ್ದಕ್ಕೆ ರಸ್ತೆಯಲ್ಲಿ ಸಂಚರಿಸಿದ್ದಾರೆ.
Prime Minister Narendra Modi on Wednesday inaugurated India's first underwater metro services, an engineering marvel in itself.
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm