ಬ್ರೇಕಿಂಗ್ ನ್ಯೂಸ್
08-03-24 02:28 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರಪತಿ ಮೂಲಕ ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿದೆ.
ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಹಾಜರಿಯು ನಮ್ಮ 'ನಾರಿ ಶಕ್ತಿ'ಗೆ ಸಾಕ್ಷಿಯಾಗಲಿದೆ ಎಂದು ಬಣ್ಣಿಸಿದ್ದಾರೆ. ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಬಲ ಹಾಗೂ ಸಾಮರ್ಥ್ಯಕ್ಕೆ ಸುಧಾಮೂರ್ತಿ ಉದಾಹರಣೆಯಾಗಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ 'ನಾರಿ ಶಕ್ತಿ' ಘೋಷಣೆಗೆ ಶಕ್ತಿಶಾಲಿ ಪುರಾವೆಯಾಗಲಿದೆ. ಫಲಪ್ರದ ಸಂಸದೀಯ ಅಧಿಕಾರಕ್ಕಾಗಿ ಅವರಿಗೆ ಶುಭ ಹಾರೈಸುತ್ತೇನೆ" ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮೋದಿ ತಿಳಿಸಿದ್ದಾರೆ.

ಸಂಸತ್ತಿನ ಮೇಲ್ಮನೆಗೆ 12 ಸದಸ್ಯರನ್ನು ರಾಷ್ಟ್ರಪತಿ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಕಲೆ, ಸಾಹಿತ್ಯ, ವಿಜ್ಞಾನ, ಸಮಾಜ ಸೇವೆ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ಸಲ್ಲಿಸಿದವರಿಗೆ ಈ ಗೌರವ ನೀಡಲಾಗುತ್ತದೆ. ಪ್ರಸ್ತುತ ರಾಜ್ಯಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರ ಒಂದು ಸ್ಥಾನ ಖಾಲಿ ಇತ್ತು. ಆ ಸ್ಥಾನಕ್ಕೆ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕರ್ನಾಟಕದಿಂದ ನಾಮನಿರ್ದೇಶನಗೊಂಡ ಮತ್ತೊಬ್ಬ ರಾಜ್ಯಸಭೆ ಸದಸ್ಯರು.
Infosys founder Narayana Murthy's wife Sudha Murty is nominated to Rajya Sabha by President Droupadi Murmu, Prime Minister Narendra Modi announces on Women's Day in a social media post.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm