ಬ್ರೇಕಿಂಗ್ ನ್ಯೂಸ್
25-03-24 12:09 pm HK News Desk ದೇಶ - ವಿದೇಶ
ಈರೋಡ್, ಮಾ.25: ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಎಂಡಿಎಂಕೆ ಸಂಸದ ಎ ಗಣೇಶಮೂರ್ತಿ (76) ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಕೀಟನಾಶಕ 'ಸಲ್ಫಸ್' ಸೇವಿಸಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಅವರ ಸ್ಥಿತಿ ಗಂಭೀರವಾಗಿದೆ.
ಇದನ್ನು ಕೇಳಿ ಆಘಾತಗೊಂಡ ಕುಟುಂಬದವರು ಅವರನ್ನು ಚಿಕಿತ್ಸೆಗಾಗಿ ಈರೋಡ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಐಸಿಯುಗೆ ದಾಖಲಿಸಿ, ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಅವರಲ್ಲಿ ಹೆಚ್ಚಿನ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಗಣೇಶಮೂರ್ತಿ ಅವರಿಗೆ ಟಿಕೆಟ್ ನೀಡಲು ಎಂಡಿಎಂಕೆ ಪಕ್ಷದ ಹೈ ಕಮಾಂಡ್ ನಿರಾಕರಿಸಿದೆ. ಇದರಿಂದ ನೊಂದ ಅವರು ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪಕ್ಷದ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವೈಕೋ ನಾಯಕತ್ವದ ಎಂಡಿಎಂಕೆ ಪಕ್ಷವು ಡಿಎಂಕೆ ಜತೆ ಮೈತ್ರಿ ಹೊಂದಿದೆ. ಕಳೆದ ಚುನಾವಣೆಯಲ್ಲಿ ಡಿಎಂಕೆ ತನ್ನ ಮಿತ್ರಪಕ್ಷಕ್ಕೆ ಈರೋಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಅಲ್ಲಿಂದ ಎಂಡಿಎಂಕೆ ಅಭ್ಯರ್ಥಿ ಗಣೇಶಮೂರ್ತಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಡಿಎಂಕೆ ತನ್ನದೇ ಅಭ್ಯರ್ಥಿ ಕೆಇ ಪ್ರಕಾಶ್ ಅವರಿಗೆ ಟಿಕೆಟ್ ನೀಡಿದೆ. ಎಂಡಿಎಂಕೆಗೆ ತಿರುಚಿರಾಪಳ್ಳಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
Ganeshamoorthy of the MDMK, the sitting Lok Sabha MP from Erode constituency in Tamil Nadu, was rushed to a hospital after he allegedly consumed pesticide. Ganesamoorthy, who was elected on a DMK ticket in the 2019 Lok Sabha polls, was admitted to a private hospital by his family members after he developed uneasiness and began to puke in the morning.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm