ಬ್ರೇಕಿಂಗ್ ನ್ಯೂಸ್
27-03-24 01:59 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ದೇಶದ ಅಭಿವೃದ್ಧಿಯ ಕುರಿತಾಗಿ ರಾಜಕಾರಣಿಗಳ ಪ್ರಚೋದನಾತ್ಮಕ ಮಾತುಗಳನ್ನು ನಂಬಬೇಡಿ. ಈ ರೀತಿಯ ಮಾತುಗಳನ್ನು ನಂಬುವುದೇ ಭಾರತೀಯರು ಮಾಡುತ್ತಿರುವ ಬಹುದೊಡ್ಡ ತಪ್ಪು ಎಂದು ಪ್ರಸಿದ್ಧ ಆರ್ಥಿಕ ತಜ್ಞ, ಮಾಜಿ ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಆರ್ಥಿಕತೆ ಬಗ್ಗೆ ರಾಜಕಾರಣಿಗಳು ಹೇಳುತ್ತಿರುವ ಹೈಪ್ ಮಾತುಗಳು ನಿಜವಾಗಲು ತುಂಬ ವರ್ಷಗಳ ಕಠಿಣ ಪರಿಶ್ರಮ ಬೇಕಾಗಬಹುದು. ಆದರೆ ಕೆಲವು ರಾಜಕಾರಣಿಗಳು ಇದೇ ಸತ್ಯವೆಂದು ಜನರನ್ನು ತಮ್ಮ ಮಾತುಗಳಿಂದ ನಂಬಿಸುತ್ತಿದ್ದಾರೆ. ಅಂತಹ ಮಾತುಗಳನ್ನು ನಂಬುತ್ತಿರುವುದೇ ಭಾರತೀಯರು ಮಾಡುತ್ತಿರುವ ದೊಡ್ಡ ತಪ್ಪು ಎಂದವರು ಹೇಳಿದ್ದಾರೆ.
ಚುನಾವಣೆ ಬಳಿಕ ಅಧಿಕಾರಕ್ಕೆ ಬರುವವರಿಗೆ ಶಿಕ್ಷಣವನ್ನು ಉತ್ತಮಗೊಳಿಸುವುದು ಮತ್ತು ಶಿಕ್ಷಣ ಮುಗಿಸಿ ಪರಿಶ್ರಮಿಗಳನ್ನು ಹೊರಗೆ ತರಬೇಕಾದ ಬಹುದೊಡ್ಡ ಸವಾಲು ಇದೆ. ಇಂತಹ ಮಾನದಂಡಗಳನ್ನು ಅನುಸರಿಸದೇ ಇದ್ದಲ್ಲಿ ಭಾರತದ ಯುವಜನಾಂಗ ಮುಂದೆ ಕಷ್ಟ ಪಡಬೇಕಾಗಬಹುದು ಎಂದಿದ್ದಾರೆ.
2047ರಲ್ಲಿ ಅಭಿವೃದ್ಧಿಗೊಂಡ ರಾಷ್ಟ್ರವಾಗಬೇಕೆಂದು ಮೋದಿ ಟಾರ್ಗೆಟ್ ನೀಡಿರುವುದನ್ನು ನಾನ್ ಸೆನ್ಸ್ ಎಂದಿರುವ ರಘುರಾಮ್ ರಾಜನ್, ನಿಮ್ಮ ಅದೆಷ್ಟೋ ಮಕ್ಕಳಿಗೆ ಉತ್ತಮ ಶಿಕ್ಷಣವೇ ಸಿಗುತ್ತಿಲ್ಲ. ಬಡತನ ಕಾರಣದಿಂದ ಶಾಲೆಯಿಂದ ಹೊರಗುಳಿಯುವೇ ರೇಟಿಂಗ್ ಹೆಚ್ಚಿರುವಾಗ ಇಂತಹದ್ದನ್ನೆಲ್ಲ ಒಪ್ಪಿಕೊಳ್ಳುವ ಹಾಗಿಲ್ಲ. ನಾವು ಖಂಡಿತವಾಗಿಯೂ ಅಭಿವೃದ್ಧಿಯ ಗತಿಯಲ್ಲಿದ್ದೇವೆ. ಆದರೆ ಯುವಜನಾಂಗ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗ ಪಡೆಯುತ್ತಿದ್ದರೆ ಮಾತ್ರ ಇದನ್ನೆಲ್ಲ ಹೇಳಿಕೊಳ್ಳಬಹುದು. ವಾಸ್ತವ ಹೇಳಬೇಕಿದ್ದರೆ ನಾವು ವಿಷಾದಕರ ಸ್ಥಿತಿಯಲ್ಲಿದ್ದೇವೆ ಎಂದಿದ್ದಾರೆ.
ಭಾರತ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿರುವುದರಿಂದ ವಿದೇಶಿಗರು ಹೂಡಿಕೆಯತ್ತ ಆಸಕ್ತಿ ತೋರುತ್ತಿದ್ದಾರೆ. ಹಾಗಂತ, ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತ ಸರಕಾರದ ಬಜೆಟ್ ನೀತಿಗಳಲ್ಲಿ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡುವ ಬದಲು ಚಿಪ್ ಸಬ್ಸಿಡಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಸೆಮಿ ಕಂಡಕ್ಟರ್ ಉದ್ಯಮ ಸ್ಥಾಪನೆಗೆ ನಾವು 76 ಸಾವಿರ ಕೋಟಿ ಸಬ್ಸಿಡಿ ನೀಡುತ್ತಿದ್ದರೆ, ಉನ್ನತ ಶಿಕ್ಷಣಕ್ಕೆ 46 ಸಾವಿರ ಕೋಟಿ ವ್ಯಯ ಮಾಡುತ್ತಿದ್ದೇವೆ. ಚಿಪ್ ತಯಾರಿಸುವ ಉದ್ಯಮಗಳ ಸ್ಥಾಪನೆಗೆ ಆಸಕ್ತಿ ತೋರುತ್ತಿದ್ದಾರೆ. ಆದರೆ ನಮ್ಮಲ್ಲಿ ಚಿಪ್ ತಯಾರಿಸವುದು ಹೇಗೆ ಎಂಬುದನ್ನು ತಿಳಿಯುವ ಇಂಜಿನಿಯರ್ ಗಳ ಉತ್ಪಾದನೆಗೆ ಆಸಕ್ತಿ ತೋರುತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Former Reserve Bank of India Governor and well-known economist Raghuram Rajan said India is making a mistake believing the hype around its strong economic growth. Rajan’s comment came during an interview with Bloomberg News, where he said there are significant structural problems that need to be fixed for the country to meet its potential.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm