ಬ್ರೇಕಿಂಗ್ ನ್ಯೂಸ್
27-03-24 10:24 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ಆಮ್ ಆದ್ಮಿ ಪಕ್ಷದ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಲಂಧರ್ ಪಶ್ಚಿಮ ಅಸೆಂಬ್ಲಿ ಕ್ಷೇತ್ರದ ಆಪ್ ಶಾಸಕ ಶೀತಲ್ ಅಂಗುರಾಲ್ ಜೊತೆಗೆ ದೆಹಲಿ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ.
2023ರಲ್ಲಿ ಪಂಜಾಬಿನ ಜಲಂಧರ್ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸುಶೀಲ್ ಕುಮಾರ್ ರಿಂಕು ಆಪ್ ಪಕ್ಷದಿಂದ ಭರ್ಜರಿ ಮತಗಳಿಂದ ಜಯ ಗಳಿಸಿದ್ದರು. ಜೂನ್ 1ರಂದು ನಡೆಯುವ ಕೊನೆಯ ಹಂತದ ಲೋಕಸಭೆ ಚುನಾವಣೆಯಲ್ಲಿ ರಿಂಕು ಬಿಜೆಪಿಯಿಂದ ಜಲಂಧರ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

2022ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಸುಶೀಲ್ ರಿಂಕು ಮತ್ತು ಶೀತಲ್ ಅಂಗುರಾಲ್ ಒಂದೇ ಕ್ಷೇತ್ರದಲ್ಲಿ ಎದುರೆದುರು ಸ್ಪರ್ಧಿಸಿದ್ದರು. ಜಲಂಧರ್ ಪಶ್ಚಿಮ ಕ್ಷೇತ್ರದ ಚುನಾವಣೆಯಲ್ಲಿ ಆಪ್ ನಿಂದ ಸ್ಪರ್ಧಿಸಿದ್ದ ಶೀತಲ್ ಅಂಗುರಾಲ್ ಗೆದ್ದುಕೊಂಡಿದ್ದರೆ, ಆಗ ಕಾಂಗ್ರೆಸಿನಲ್ಲಿದ್ದ ಸುಶೀಲ್ ರಿಂಕ್ ಸೋಲು ಕಂಡಿದ್ದರು. 2023ರಲ್ಲಿ ಆಪ್ ಪಕ್ಷ ಸೇರಿದ್ದ ರಿಂಕು, ಲೋಕಸಭೆಗೆ ಸ್ಪರ್ಧಿಸಿ ಗೆಲುವು ಕಂಡಿದ್ದರು.
543 ಸಂಸತ್ ಸ್ಥಾನಗಳ ಪೈಕಿ ಸುಶೀಲ್ ರಿಂಕ್ ಆಪ್ ಪಕ್ಷದಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದರು. ಜಲಂಧರ್ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ. ಆಪ್ ಪಕ್ಷವು ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ಮಾಡಿದೆ ಎಂದು ಸುಶೀಲ್ ರಿಂಕು ಹೇಳಿದ್ದಾರೆ. ನಾನು ಅಧಿಕಾರಕ್ಕಾಗಿ ಬಿಜೆಪಿ ಸೇರಿದ್ದಲ್ಲ, ಜಲಂಧರ್ ನಗರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಆಪ್ ಪಕ್ಷವು ಪಂಜಾಬಿನಲ್ಲಿ ಅಧಿಕಾರ ಹಿಡಿದಿದೆ.
AAP's only Lok Sabha member, Sushil Kumar Rinku, joined the BJP today. The move was accompanied by Jalandhar West MLA Sheetal Angural also joining the BJP ranks at the party headquarters in Delhi.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm