ಬ್ರೇಕಿಂಗ್ ನ್ಯೂಸ್
27-03-24 10:24 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ಆಮ್ ಆದ್ಮಿ ಪಕ್ಷದ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಲಂಧರ್ ಪಶ್ಚಿಮ ಅಸೆಂಬ್ಲಿ ಕ್ಷೇತ್ರದ ಆಪ್ ಶಾಸಕ ಶೀತಲ್ ಅಂಗುರಾಲ್ ಜೊತೆಗೆ ದೆಹಲಿ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ.
2023ರಲ್ಲಿ ಪಂಜಾಬಿನ ಜಲಂಧರ್ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸುಶೀಲ್ ಕುಮಾರ್ ರಿಂಕು ಆಪ್ ಪಕ್ಷದಿಂದ ಭರ್ಜರಿ ಮತಗಳಿಂದ ಜಯ ಗಳಿಸಿದ್ದರು. ಜೂನ್ 1ರಂದು ನಡೆಯುವ ಕೊನೆಯ ಹಂತದ ಲೋಕಸಭೆ ಚುನಾವಣೆಯಲ್ಲಿ ರಿಂಕು ಬಿಜೆಪಿಯಿಂದ ಜಲಂಧರ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

2022ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಸುಶೀಲ್ ರಿಂಕು ಮತ್ತು ಶೀತಲ್ ಅಂಗುರಾಲ್ ಒಂದೇ ಕ್ಷೇತ್ರದಲ್ಲಿ ಎದುರೆದುರು ಸ್ಪರ್ಧಿಸಿದ್ದರು. ಜಲಂಧರ್ ಪಶ್ಚಿಮ ಕ್ಷೇತ್ರದ ಚುನಾವಣೆಯಲ್ಲಿ ಆಪ್ ನಿಂದ ಸ್ಪರ್ಧಿಸಿದ್ದ ಶೀತಲ್ ಅಂಗುರಾಲ್ ಗೆದ್ದುಕೊಂಡಿದ್ದರೆ, ಆಗ ಕಾಂಗ್ರೆಸಿನಲ್ಲಿದ್ದ ಸುಶೀಲ್ ರಿಂಕ್ ಸೋಲು ಕಂಡಿದ್ದರು. 2023ರಲ್ಲಿ ಆಪ್ ಪಕ್ಷ ಸೇರಿದ್ದ ರಿಂಕು, ಲೋಕಸಭೆಗೆ ಸ್ಪರ್ಧಿಸಿ ಗೆಲುವು ಕಂಡಿದ್ದರು.
543 ಸಂಸತ್ ಸ್ಥಾನಗಳ ಪೈಕಿ ಸುಶೀಲ್ ರಿಂಕ್ ಆಪ್ ಪಕ್ಷದಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದರು. ಜಲಂಧರ್ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ. ಆಪ್ ಪಕ್ಷವು ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ಮಾಡಿದೆ ಎಂದು ಸುಶೀಲ್ ರಿಂಕು ಹೇಳಿದ್ದಾರೆ. ನಾನು ಅಧಿಕಾರಕ್ಕಾಗಿ ಬಿಜೆಪಿ ಸೇರಿದ್ದಲ್ಲ, ಜಲಂಧರ್ ನಗರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಆಪ್ ಪಕ್ಷವು ಪಂಜಾಬಿನಲ್ಲಿ ಅಧಿಕಾರ ಹಿಡಿದಿದೆ.
AAP's only Lok Sabha member, Sushil Kumar Rinku, joined the BJP today. The move was accompanied by Jalandhar West MLA Sheetal Angural also joining the BJP ranks at the party headquarters in Delhi.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm