ಬ್ರೇಕಿಂಗ್ ನ್ಯೂಸ್
29-03-24 10:57 pm HK News Desk ದೇಶ - ವಿದೇಶ
ನವದೆಹಲಿ, ಮಾ.29: ಐಸಿಸ್ ಉಗ್ರವಾದಿ ಸಂಘಟನೆಯಿಂದ ಭಾರತಕ್ಕೆ ಗಂಭೀರ ಅಪಾಯ ಎದುರಾಗಲಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಇಂಗ್ಲಿಷ್ ವರದಿ ಮಾಡಿದೆ.
ತಾಲಿಬಾನ್ ದುರ್ಬಲಗೊಂಡ ಬಳಿಕ ಐಸಿಸ್ ಉಗ್ರರು ಪಾಕಿಸ್ತಾನದ ಐಎಸ್ಐ ಗುಪ್ತಚರ ಸಂಸ್ಥೆ ಜೊತೆಗೆ ಕೈಜೋಡಿಸಿದ್ದು, ಇಸ್ಲಾಮಿಕ್ ಸ್ಟೇಟ್ ಪಾಕಿಸ್ತಾನ್ ಪ್ರೊವಿನ್ಸ್ (ಐಎಸ್ ಪಿಪಿ) ಎಂದು ಹೊಸ ಸಂಘಟನೆ ಕಟ್ಟಿಕೊಂಡಿದೆ. ಇದರ ಮಾಧ್ಯಮ ಸಂಸ್ಥೆಯಾಗಿರುವ ನಾಶಿರ್ ಮೀಡಿಯಾ ಗ್ರೂಪ್ ಇದೀಗ, ಮುಂದಿನ ಟಾರ್ಗೆಟ್ ಯಾರು ಎಂದು ಪೋಸ್ಟ್ ಮಾಡಿದೆ. ಅದರಲ್ಲಿ ಭಾರತ, ಅಮೆರಿಕ, ಚೀನಾ, ಡೆನ್ಮಾರ್ಕ್ ಹೆಸರನ್ನು ಉಲ್ಲೇಖಿಸಿದೆ. ಇದೇ ಪೋಸ್ಟ್ ನಲ್ಲಿ ಇತ್ತೀಚೆಗೆ ರಷ್ಯಾದ ಮಾಸ್ಕೋ ಮತ್ತು ಕಂದಹಾರ್ ಬಾಂಬ್ ದಾಳಿಯ ಫೋಟೊವನ್ನು ತೋರಿಸಿದೆ.
ಇದೇ ಮಾರ್ಚ್ 21ರಂದು ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸಂಘಟನೆಯ ಮುಖ್ಯಸ್ಥ ಮುಲ್ಲಾ ಹಿಬಾತುಲ್ಲಾನನ್ನು ಐಸಿಸ್ ಟಾರ್ಗೆಟ್ ಮಾಡಿತ್ತು. ಇದರ ಮರುದಿನವೇ ರಷ್ಯಾದ ಮಾಸ್ಕೋದಲ್ಲಿ ಶಸ್ತ್ರಸಜ್ಜಿತ ಗುಂಪು ದಾಳಿ ನಡೆಸಿದ್ದು, ಆಟೊಮೆಟಿಕ್ ಗನ್ ಹಿಡಿದು ಹಾಲ್ ನುಗ್ಗಿದ್ದ ಉಗ್ರರು 130 ಮಂದಿಯನ್ನು ಕೊಂದು ಹಾಕಿದ್ದರು.
ಐಸಿಸ್ ಬೆದರಿಕೆಯನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಈಗಾಗಲೇ ಭಾರತದಲ್ಲಿ ಒಂದು ವರ್ಗದ ಯುವಕರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುತ್ತಿದೆ, ಆದರೆ ದಾಳಿಗೆ ಯೋಜನೆ ಹಾಕುತ್ತಿರುವುದನ್ನು ಪ್ರತಿ ಬಾರಿ ನಾವು ಪೊಲೀಸರ ಮೂಲಕ ವಿಫಲಗೊಳಿಸಿದ್ದೇವೆ. ಇಂತಹ ಕೃತ್ಯಗಳ ಬಗ್ಗೆ ನಾವು ಹೈಎಲರ್ಟ್ ಇದ್ದೇವೆ ಎಂದು ಕೇಂದ್ರ ಗುಪ್ತಚರ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಕಿಸ್ತಾನ ಗಡಿಯಲ್ಲಿ ತಾಲಿಬಾನ್ ಮತ್ತು ಪಾಕ್ ಸೇನೆ ಪ್ರತಿ ಬಾರಿ ದಾಳಿ- ಪ್ರತಿ ದಾಳಿ ನಡೆಸುತ್ತ ಬಂದಿದೆ. ಇದೀಗ ಐಸಿಸ್, ಪಾಕಿಸ್ತಾನದ ಐಎಸ್ಐ ಜೊತೆಗೆ ಕೈಜೋಡಿಸಿದ್ದು, ಮುಂದಿನ ದಾಳಿಗೆ ಯೋಜನೆ ಹಾಕಿದೆ ಎಂದವರು ಉಲ್ಲೇಖಿಸಿದ್ದಾರೆ.
ಐಸಿಸ್ ಈಗಾಗಲೇ ಭಾರತದ ಗಲ್ಲಿ ಯುವಕರ ಬೆಂಬಲ ಗಳಿಸಿದ್ದು, ವಿಧ್ವಂಸಕ ಕೃತ್ಯಗಳಿಗೆ ಪ್ರಯತ್ನ ಪಟ್ಟಿರುವುದು ಪತ್ತೆಯಾಗಿದೆ. ಬೆಂಗಳೂರಿನ ಕೆಫೆ ಬಾಂಬ್ ಸ್ಫೋಟ ಪ್ರಕರಣ ಅದರಲ್ಲಿ ಒಂದು. ಅದರಲ್ಲಿ ಐಸಿಸ್ ಮನಸ್ಥಿತಿ ಇದ್ದವರೇ ಕೈಜೋಡಿಸಿರುವುದು ತನಿಖೆಯಲ್ಲಿ ಕಂಡುಬಂದಿದೆ.
India is facing a serious ISIS threat and is definitely the target of the global terrorist group because of the presence of radical elements, intelligence agency sources told CNN-News18 on Friday. Recent threats by the Islamic State Pakistan Province (ISPP) can’t be taken lightly, they said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm