ಬ್ರೇಕಿಂಗ್ ನ್ಯೂಸ್
30-03-24 12:30 pm HK News Desk ದೇಶ - ವಿದೇಶ
ಚೆನ್ನೈ, ಮಾ 30: ತಮಿಳು ನಟ ಡೇನಿಯಲ್ ಬಾಲಾಜಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.
ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ ಹೆಸರುವಾಸಿಯಾಗಿದ್ದಾರೆ, ತಮ್ಮ ವೈವಿಧ್ಯಯ ಪ್ರತಿಭೆ, ಬೆಳ್ಳಿತೆರೆ ಮೇಲೆ ಮನಮೋಹಕ ವರ್ಚಸ್ಸಿಗೆ ಹೆಸರುವಾಸಿಯಾಗಿದ್ದ ನಟನಿಗೆ ಕಳೆದ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಚಿತ್ರದಲ್ಲಿ ವಿಲನ್ ಆಗಿ ನಟಿಸುವ ಮೂಲಕ ಕನ್ನಡಿಗರ ಮನೆಮಾತಾಗಿದ್ದ ನಟ ಡೇನಿಯಲ್ ಬಾಲಾಜಿ ಬಹು ಭಾಷಾನಟನಾಗಿಯೂ ಗುರುತಿಸಿಕೊಂಡಿದ್ದರು.


ಇಂದು ಅಂತಿಮ ದರ್ಶನ, ಅಂತ್ಯಕ್ರಿಯೆ:
ಡೇನಿಯಲ್ ಅವರ ಪಾರ್ಥಿವ ಶರೀರವನ್ನು ಇಂದು ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ. ಅವರ ನಿಧನದ ಸುದ್ದಿ ತಮಿಳು ಚಿತ್ರರಂಗದಲ್ಲಿ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತ ಮತ್ತು ದುಃಖವನ್ನು ಉಂಟುಮಾಡಿದೆ.
ಧಾರಾವಾಹಿ ಮೂಲಕ ತಮ್ಮ ಸಿನಿವೃತ್ತಿಯನ್ನು ಆರಂಭಿಸಿದ ಬಾಲಾಜಿ ಅವರು ಚಿತ್ತಿ ಧಾರಾವಾಹಿಯಲ್ಲಿ ಮಾಡಿದ ಡೇನಿಯಲ್ ಪಾತ್ರ ವ್ಯಾಪಕ ಮನ್ನಣೆ ಮತ್ತು ಜನಮೆಚ್ಚುಗೆ ಗಳಿಸಿ ಆ ಪಾತ್ರ ಮೂಲಕವೇ ಅವರು ನಂತರ ಡೇನಿಯಲ್ ಬಾಲಾಜಿ ಎಂದು ಜನಪ್ರಿಯರಾದರು. ನಟನೆ ಹೊರತುಪಡಿಸಿ ಬಾಲಾಜಿ ದೇವರ ಮೇಲೆ ಅಪಾರ ನಂಬಿಕೆ ಉಳ್ಳವರಾಗಿದ್ದರು. ಅವಡಿಯಲ್ಲಿ ದೇವಾಲಯವನ್ನು ನಿರ್ಮಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.


ಡೇನಿಯಲ್ ಹೆಸರು ಬಂದಿದ್ದು ಹೇಗೆ?
ಸಿನಿಮಾಗಳಲ್ಲಿ ಖಳನಾಯಕನ ಪಾತ್ರ ಮಾಡುತ್ತ ಜನಪ್ರಿಯತೆ ಪಡೆದಿದ್ದ ಬಾಲಾಜಿ ಅವರು ಹೆಚ್ಚಾಗಿ ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಬಾಲಾಜಿ ಅವರು ಕಮಲ್ ಹಾಸನ್ರ ತೆರೆ ಕಾಣದ ‘ಮರುದುನಯಗಂ’ ಸಿನಿಮಾದಲ್ಲಿ ಯುನಿಟ್ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದರು. ‘ಚಿತ್ತಿ’ ಎನ್ನುವ ಧಾರಾವಾಹಿಯಲ್ಲಿಯೂ ಅವರು ನಟಿಸಿದ್ದರು. ಈ ಸಿನಿಮಾದಲ್ಲಿ ರಾಧಿಕಾ ಶರತ್ಕುಮಾರ್ ಅವರು ಮುಖ್ಯ ಪಾತ್ರ ನಿರ್ವಹಿಸಿದ್ದರು. ಧಾರಾವಾಹಿಯಲ್ಲಿ ಬಾಲಾಜಿ ಅವರು ಡೇನಿಯಲ್ ಎನ್ನುವ ಪಾತ್ರ ಮಾಡಿದ್ದರು. ಇದರಿಂದಲೇ ಅವರಿಗೆ ಡೇನಿಯಲ್ ಎಂಬ ಸ್ಕ್ರೀನ್ ಹೆಸರು ಬಂತು.
ಸಿನಿಮಾಗಳಲ್ಲಿ ನಟನೆ ;
‘ಏಪ್ರಿಲ್ ಮಧತ್ತಿಲ್’ ಎನ್ನುವ ಸಿನಿಮಾದಲ್ಲಿ ಅವರು ನಟಿಸಿದ್ದರು. ಸೂರ್ಯ, ಜ್ಯೋತಿಕಾರ ಕಾಖ ಕಾಖ‘ ಸಿನಿಮಾವು ಬಾಲಾಜಿಗೆ ಜನಪ್ರಿಯತೆ ನೀಡಿತ್ತು. ವೆಟ್ರಿ ಮಾರನ್ ಅವರ ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿಯೂ ಬಾಲಾಜಿ ನಟಿಸಿದ್ದರು. ದಳಪತಿ ವಿಜಯ್, ಅಜಿತ್, ಸಿಂಬು ಅವರ ಸಿನಿಮಾದಲ್ಲಿಯೂ ಬಾಲಾಜಿ ನಟಿಸಿದ್ದರು. ಕೊನೆಯದಾಗಿ ಅವರಯ ‘ಅರಿಯಾವನ್’ ಚಿತ್ರದಲ್ಲಿ ನಟಿಸಿದ್ದರು.
Tamil actor Daniel Balaji passed away on Friday, March 29 night. He suffered a heart attack following which he was rushed to a private hospital in Chennai, where he breathed his last. Balaji’s final rites will be held today. He was 48.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm