ಬ್ರೇಕಿಂಗ್ ನ್ಯೂಸ್
31-03-24 02:06 pm HK NEWS ದೇಶ - ವಿದೇಶ
ಬೆಂಗಳೂರು, ಮಾ.31: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಅವರನ್ನು ಗೆಲ್ಲಿಸಲು ಗೃಹ ಸಚಿವ ಅಮಿತ್ ಶಾ ಖುದ್ದು ಅಖಾಡಕ್ಕಿಳಿಯುತ್ತಿದ್ದಾರೆ. ಡಿ.ಕೆ. ಬ್ರದರ್ಸ್ಗೆ ಠಕ್ಕರ್ ನೀಡಲು ಬಿಜೆಪಿ ರಣತಂತ್ರ ಹಣೆದಿದ್ದು, ಮೈತ್ರಿ ನಾಯಕರು ಬೃಹತ್ ರೋಡ್ ಶೋ ಮೂಲಕ ಶಕ್ತಿಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.
ಡಿಸಿಎಂ ಡಿಕೆಶಿ ಸೋದರ ಡಿಕೆ ಸುರೇಶ್ ಸಂಸದರಾಗಿರುವ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಾಡು ಆಗಿದೆ. ಮೊನ್ನೆಯಷ್ಟೇ ನಾಮಪತ್ರ ಸಲ್ಲಿಕೆಗೆ ಬೃಹತ್ ರ್ಯಾಲಿ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ದ ಕಾಂಗ್ರೆಸ್ಗೆ ಠಕ್ಕರ್ ಕೊಡಲು ಮೈತ್ರಿ ಪಕ್ಷ ಸಿದ್ಧತೆ ಆರಂಭಿಸಿದೆ. ಡಿಕೆಶಿ ಅಖಾಡಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.
ಏಪ್ರಿಲ್ 1ರ ರಾತ್ರಿ ಅಮಿತ್ ಶಾ ಬೆಂಗಳೂರಿಗೆ ಅಗಮಿಸಲಿದ್ದಾರೆ. ಏ.2 ರಂದು ಬೆಳಗ್ಗೆ 9 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಒಳಗೊಂಡು ಬೃಹತ್ ಸಮಾವೇಶ ಮಾಡಲಿದ್ದಾರೆ. ಮಧ್ಯಾಹ್ನ 2 ರಿಂದ 4 ಗಂಟೆಯ ವರೆಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಸಭೆ ನಡೆಸುವ ಮೂಲಕ ಚುನಾವಣೆ ಗೆಲುವಿಗೆ ರಣತಂತ್ರ ಹೂಡಲಿದ್ದಾರೆ.
ಬೆಂಗಳೂರಿನಲ್ಲಿ ಸಮಾವೇಶದ ಬಳಿಕ ಸಂಜೆ 6 ಗಂಟೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಹಿರಂಗ ಸಮಾವೇಶ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಮತಯಾಚನೆ ಮಾಡಲಿರುವ ಅಮಿತ್ ಶಾಗೆ ಹೆಚ್ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ವಿಜಯೇಂದ್ರ, ಅಶೋಕ್ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರು ಸಾಥ್ ನೀಡಲಿದ್ದಾರೆ.
Union Home Minister Amit Shah will launch his Lok Sabha poll campaign in Karnataka from April 2, BJP state general secretary V Sunil Kumar said on Saturday. Shah will hold a meeting with the Bharatiya Janata Party and its ally Janata Dal (Secular) leaders at 9 am on April 2.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm