ಬ್ರೇಕಿಂಗ್ ನ್ಯೂಸ್
30-11-20 11:19 am Headline Karnataka News Network ದೇಶ - ವಿದೇಶ
ಜೈಪುರ, ನವೆಂಬರ್ 30: ಸಾಮಾನ್ಯರಿಂದ ಹಿಡಿದು ಗಣ್ಯಾತಿಗಣ್ಯರು ಮಹಾಮಾರಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಅಹಮ್ಮದ್ ಪಟೇಲ್ ಕೂಡ ಕೊರೊನಾದಿಂದಾಗಿ ಮೃತಪಟ್ಟಿದ್ದರು. ಇದೀಗ ರಾಜಸ್ಥಾನದ ಬಿಜೆಪಿ ಶಾಸಕಿ ಕೋವಿಡ್ 19 ನಿಂದ ಇಹಲೋಕ ತ್ಯಜಿಸಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟು ರಾಜಸ್ಥಾನದ ರಾಜಸಮಂದ್ ಕ್ಷೇತ್ರದ ಬಿಜೆಪಿ ನಾಯಕಿ, ಶಾಸಕಿ ಕಿರಣ್ ಮಹೇಶ್ವರಿ(59) ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಕಿರಣ್ ಮಹೇಶ್ವರಿ ಅವರಿಗೆ ನವೆಂಬರ್ ಮೊದಲ ವಾರದಲ್ಲಿಯೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಸ್ವಲ್ಪ ದಿನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ದಿನದಿಂದ ದಿನ ಕ್ಷೀಣಿಸತೊಡಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ರಾಜಸಮಂದ್ ಕ್ಷೇತ್ರದಲ್ಲಿ ಕಿರಣ್ ಮಹೆಶ್ವರಿ ಅವರು ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಸದ್ಯ ಶಾಸಕಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತಿತರ ಗಣ್ಯರು ಸಂತಾಸ ಸೂಚಿಸಿದ್ದಾರೆ.
BJP leader and MLA from Rajsamand in Rajasthan Kiran Maheshwari, who had tested positive for coronavirus, died at a hospital in Gurgaon. She was 59.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm