ಬ್ರೇಕಿಂಗ್ ನ್ಯೂಸ್
05-04-24 12:54 pm HK News Desk ದೇಶ - ವಿದೇಶ
ನವದೆಹಲಿ, ಎ.5: ವಿಭಿನ್ನ ಧರ್ಮದ ವಿದ್ಯಾರ್ಥಿಗಳ ನಡುವೆ ಧಾರ್ಮಿಕ ನಂಬಿಕೆಗಳಿಗೆ ಘಾಸಿ ಆಗದಂತೆ ನೋಡಿಕೊಳ್ಳಲು ವಿಭಿನ್ನ ನಂಬಿಕೆಗಳನ್ನು ಗೌರವಿಸುವುದು ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವ ಗುರಿಯೊಂದಿಗೆ ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಯ ಶಾಲೆಗಳಿಗೆ ಬಿಷಪ್ ಸಮ್ಮೇಳನ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.
ಸರ್ವಧರ್ಮೀಯ ವಿದ್ಯಾರ್ಥಿಗಳು ಎಲ್ಲಾ ನಂಬಿಕೆಗಳು ಹಾಗೂ ಸಂಪ್ರದಾಯಗಳನ್ನು ಗೌರವಿಸಬೇಕು. ಪ್ರತಿದಿನವೂ ಸಂವಿಧಾನದ ಪ್ರಸ್ತಾವನೆಯನ್ನು ಓದಬೇಕು, ಹಾಗೂ ಇತರೆ ಧರ್ಮೀಯ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಸಂಪ್ರದಾಯಗಳನ್ನು ಹೇರಬಾರದು ಎಂದು ಭಾರತೀಯ ಕ್ಯಾಥೋಲಿಕ್ ಬಿಷಪ್ಸ್ ಸಮ್ಮೇಳನ (ಸಿಬಿಸಿಐ) ಮಾರ್ಗಸೂಚಿಗಳನ್ನು ಹೊರಡಿಸಿದೆ.
ದೇಶದಲ್ಲಿ ಪ್ರಸ್ತುತದ ಸಮಾಜೋ- ಸಾಂಸ್ಕೃತಿಕ ಸನ್ನಿವೇಶಕ್ಕೆ ಚರ್ಚ್ನ ಪ್ರತಿಕ್ರಿಯೆಯ ಬಗ್ಗೆ ಚರ್ಚೆ ನಡೆಸಲು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕ್ರೈಸ್ತ ಸಮುದಾಯ ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ವಿರುದ್ಧದ ದಾಳಿಗಳು ಮತ್ತು ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.
ತ್ರಿಪುರಾದ ಅಗರ್ತಲಾದಲ್ಲಿ ಧಾರ್ಮಿಕ ಸಂಕೇತವುಳ್ಳ ದಾರವನ್ನು ಕೈಗೆ ಕಟ್ಟಿಕೊಂಡು ಬಂದಿದ್ದ ವಿದ್ಯಾರ್ಥಿಯನ್ನು ಖಾಸಗಿ ಕ್ರೈಸ್ತ ಮಿಷನರಿ ಶಾಲೆಯಲ್ಲಿ ಶಿಕ್ಷಕರು ತರಗತಿಯಿಂದ ಹೊರಹಾಕಿದ ಘಟನೆ ವಿರುದ್ಧ ಕಳೆದ ಫೆಬ್ರವರಿ ತಿಂಗಳಲ್ಲಿ ಬಜರಂಗದಳದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅದೇ ತಿಂಗಳಲ್ಲಿ ಅಸ್ಸಾಂನಲ್ಲಿ ಕ್ರೈಸ್ತ ಶಾಲೆಗಳಿಗೆ 15 ದಿನಗಳ ಎಚ್ಚರಿಕೆ ನೀಡಿದ್ದ ಹಿಂದೂ ಸಂಘಟನೆಗಳು, ತಮ್ಮ ಶಿಕ್ಷಣ ಸಂಸ್ಥೆಯ ಆವರಣಗಳಲ್ಲಿ ಪಾದ್ರಿಗಳು, ಕ್ರೈಸ್ತ ಸನ್ಯಾಸಿನಿಯರು ಮತ್ತು ಇತರರು ಕ್ರೈಸ್ತ ಧರ್ಮದ ಸಂಕೇತ ಹಾಗೂ ಧಾರ್ಮಿಕ ಹವ್ಯಾಸಗಳನ್ನು ಕಿತ್ತು ಹಾಕುವಂತೆ ಸೂಚನೆ ನೀಡಿದ್ದವು. ಇದರಿಂದ ಎಚ್ಚೆತ್ತುಕೊಂಡಿರುವ ಸಿಬಿಸಿಐ, ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಗಳಿಗೆ 13 ಪುಟಗಳ ಮಾರ್ಗಸೂಚಿ ನೀಡಿದ್ದು ಧಾರ್ಮಿಕ ಸಹಿಷ್ಣುತೆ ಬಗ್ಗೆ ಪಾಠ ಹೇಳಿದೆ.
The Catholic Bishops’ Conference of India (CBCI) recent guidelines to schools under its fold to “face the emerging challenges due to the current socio-cultural, religious, and political situation in the country” have been welcomed by the Guwahati-based right-wing group Kutumba Surakshya Parishad (KSP).
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am