ಬ್ರೇಕಿಂಗ್ ನ್ಯೂಸ್
07-04-24 02:41 pm HK News Desk ದೇಶ - ವಿದೇಶ
ಕಾಸರಗೋಡು, ಎ.6: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದು ತಾಯಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಬಳಿಕ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ನಡೆದಿದೆ.
ಮೂಲತಃ ಇಡುಕ್ಕಿ ಜಿಲ್ಲೆಯ ತೊಡುಪುಳ ನಿವಾಸಿ ಶರತ್ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಗಂಡ ಶರತ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇವರಿಗೆ ನಾಲ್ಕು ತಿಂಗಳ ಹೆಣ್ಣು ಮಗುವಿತ್ತು. ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಂದು ಇಡುಕ್ಕಿ ಜಿಲ್ಲೆಯ ತೊಡುಪುಳದ ಪತಿಯ ಮನೆಯಿಂದ ಪುತ್ರಿ ಶ್ರೀನಂದಾ ಮತ್ತು ಪುತ್ರ ಶ್ರೀಹರಿಯೊಂದಿಗೆ ಮಾ.31ರಂದು ಕಾಸರಗೋಡು ಜಿಲ್ಲೆಯ ಮುಳಿಯಾರು ಬಳಿಯ ಕೋಪಾಳಕೊಚ್ಚಿ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಬಂದಿದ್ದರು.
ಎ.5ರಂದು ಮಧ್ಯಾಹ್ನ ಬಿಂದು ಮನೆಯ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೈಯ ನರ ಕತ್ತರಿಸಲ್ಪಟ್ಟು ರಕ್ತ ಸೋರುತ್ತಿತ್ತು. ಇದೇ ವೇಳೆ ನಾಲ್ಕು ತಿಂಗಳ ಮಗು ಶ್ರೀನಂದಾ ಕೊಠಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಕಂಡುಬಂದಿತ್ತು. ಮನೆಯವರು ಕೂಡಲೇ ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಬಿಂದು ಮತ್ತು ಶರತ್ ಅವರ ವಿವಾಹ ಆರು ವರ್ಷಗಳ ಹಿಂದೆ ನಡೆದಿತ್ತು. ಕಾಸರಗೋಡು ಡಿವೈಎಸ್ಪಿ ಜಯನ್ ಡೊಮಿನಿಕ್ ಹಾಗೂ ಆದೂರು ಪೊಲೀಸ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದ್ದು, ಪತಿಯ ಮೇಲಿನ ಸಿಟ್ಟಿನಲ್ಲಿ ಪತ್ನಿ ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಶಂಕೆ ವ್ಯಕ್ತವಾಗಿದೆ.
In a gruesome incident, a Muliyar native, Bindhu (28) killed her four-month-old infant Srinanda, and died by suicide.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm