ಬ್ರೇಕಿಂಗ್ ನ್ಯೂಸ್
07-04-24 02:41 pm HK News Desk ದೇಶ - ವಿದೇಶ
ಕಾಸರಗೋಡು, ಎ.6: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದು ತಾಯಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಬಳಿಕ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ನಡೆದಿದೆ.
ಮೂಲತಃ ಇಡುಕ್ಕಿ ಜಿಲ್ಲೆಯ ತೊಡುಪುಳ ನಿವಾಸಿ ಶರತ್ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಗಂಡ ಶರತ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇವರಿಗೆ ನಾಲ್ಕು ತಿಂಗಳ ಹೆಣ್ಣು ಮಗುವಿತ್ತು. ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಂದು ಇಡುಕ್ಕಿ ಜಿಲ್ಲೆಯ ತೊಡುಪುಳದ ಪತಿಯ ಮನೆಯಿಂದ ಪುತ್ರಿ ಶ್ರೀನಂದಾ ಮತ್ತು ಪುತ್ರ ಶ್ರೀಹರಿಯೊಂದಿಗೆ ಮಾ.31ರಂದು ಕಾಸರಗೋಡು ಜಿಲ್ಲೆಯ ಮುಳಿಯಾರು ಬಳಿಯ ಕೋಪಾಳಕೊಚ್ಚಿ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಬಂದಿದ್ದರು.
ಎ.5ರಂದು ಮಧ್ಯಾಹ್ನ ಬಿಂದು ಮನೆಯ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೈಯ ನರ ಕತ್ತರಿಸಲ್ಪಟ್ಟು ರಕ್ತ ಸೋರುತ್ತಿತ್ತು. ಇದೇ ವೇಳೆ ನಾಲ್ಕು ತಿಂಗಳ ಮಗು ಶ್ರೀನಂದಾ ಕೊಠಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಕಂಡುಬಂದಿತ್ತು. ಮನೆಯವರು ಕೂಡಲೇ ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಬಿಂದು ಮತ್ತು ಶರತ್ ಅವರ ವಿವಾಹ ಆರು ವರ್ಷಗಳ ಹಿಂದೆ ನಡೆದಿತ್ತು. ಕಾಸರಗೋಡು ಡಿವೈಎಸ್ಪಿ ಜಯನ್ ಡೊಮಿನಿಕ್ ಹಾಗೂ ಆದೂರು ಪೊಲೀಸ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದ್ದು, ಪತಿಯ ಮೇಲಿನ ಸಿಟ್ಟಿನಲ್ಲಿ ಪತ್ನಿ ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಶಂಕೆ ವ್ಯಕ್ತವಾಗಿದೆ.
In a gruesome incident, a Muliyar native, Bindhu (28) killed her four-month-old infant Srinanda, and died by suicide.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am