ಬ್ರೇಕಿಂಗ್ ನ್ಯೂಸ್
09-04-24 03:27 pm HK News Desk ದೇಶ - ವಿದೇಶ
ನವದೆಹಲಿ, ಎ.9: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಒಡೆತನದ ಪ್ರತಿ ಚರಾಸ್ತಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಅರುಣಾಚಲ ಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಕರಿಖೋ ಕ್ರಿ ಅವರ 2019ರ ಚುನಾವಣಾ ಆಯ್ಕೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಅಭ್ಯರ್ಥಿಯ ಪ್ರತಿ ಆಸ್ತಿಯ ಬಗ್ಗೆಯೂ ತಿಳಿದುಕೊಳ್ಳಲು ಮತದಾರರಿಗೆ ಸಂಪೂರ್ಣ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಚುನಾವಣೆ ಸ್ಪರ್ಧಿಸುವ ಅಭ್ಯರ್ಥಿ ತನ್ನ ಉಮೇದುವಾರಿಕೆಗೆ ಸಂಬಂಧಿಸದ ವಿಷಯಗಳ ಬಗ್ಗೆ ಗೌಪ್ಯತೆ ಇರಿಸಿಕೊಳ್ಳುವ ಹಕ್ಕನ್ನು ಹೊಂದಿರುತ್ತಾನೆ ಎಂದು ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ವಿಭಾಗೀಯ ಪೀಠವು ಶಾಸಕ ಕರಿಖೋ ಕ್ರಿ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿದ್ದ ಅಸ್ಸಾಂ ರಾಜ್ಯುಲದ ಗುವಾಹಟಿ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿತು.
ನಾಮಪತ್ರ ಸಲ್ಲಿಸುವಾಗ ಶಾಸಕರು ತಮ್ಮ ಪತ್ನಿ ಮತ್ತು ಮಗನ ಒಡೆತನದ ಮೂರು ವಾಹನಗಳನ್ನು ಬಹಿರಂಗಪಡಿಸದೆ ಅನಾವಶ್ಯಕ ಪ್ರಭಾವ ಬೀರಿದ್ದಾರೆ ಎಂದು ಕರಿಖೋ ಕ್ರಿ ವಿರುದ್ಧ ಪ್ರತಿಸ್ಪರ್ಧಿ ವ್ಯಕ್ತಿ ಆಕ್ಷೇಪ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ನಾಮಪತ್ರ ಸಲ್ಲಿಸುವ ಮೊದಲೇ ವಾಹನಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಅಥವಾ ಮಾರಾಟ ಮಾಡಲಾಗಿದೆ ಎಂಬುದನ್ನು ಗಮನಿಸಿದ್ದು, ವಾಹನಗಳು ಇನ್ನೂ ಕ್ರಿ ಅವರ ಕುಟುಂಬದ ಒಡೆತನದಲ್ಲಿದೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟಿನಲ್ಲಿ ವಾದಿಸಲಾಗಿದೆ.
ಮತದಾರರು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುವುದರಿಂದ ಕ್ರಿ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ಬಹಿರಂಗಪಡಿಸಬೇಕು ಎಂಬ ಅರ್ಜಿದಾರರ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಎಲ್ಲವನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಹೇಳಿದೆ.
Holding that candidates contesting elections are not required to disclose each and every moveable property owned by them or their dependents unless they are of substantial value or reflect a luxurious lifestyle, the Supreme Court on Tuesday (April 09) upheld the 2019 election of the Independent MLA Karikho Kri from the Tezu Assembly constituency in Arunachal Pradesh.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm