ಬ್ರೇಕಿಂಗ್ ನ್ಯೂಸ್
12-04-24 08:16 pm HK NEWS ದೇಶ - ವಿದೇಶ
ನವದೆಹಲಿ, ಎ.12: ಇಸ್ರೇಲ್ ಮೇಲೆ ಇನ್ನೆರಡು ದಿನದಲ್ಲಿ ಇರಾನ್ ಭಾರೀ ದೊಡ್ಡ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸಲು ಸಜ್ಜಾಗಿದೆ ಎಂದು ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಇದರ ಬೆನ್ನಲ್ಲೆ ಅಮೆರಿಕ, ಭಾರತ ಸೇರಿದಂತೆ ತನ್ನ ಪ್ರಜೆಗಳನ್ನು ಇಸ್ರೇಲ್ ಮತ್ತು ಇರಾನ್ ದೇಶಕ್ಕೆ ತೆರಳದಂತೆ ಸೂಚನೆ ನೀಡಿದೆ.
ಇರಾನ್ ದೇಶದ ಸುಪ್ರೀಂ ನಾಯಕ ಅಯಾತೊಲ್ಲಾ ಅಲಿ ಖೊಮೇನಿ ನೇರ ಉಸ್ತುವಾರಿಯಲ್ಲೇ ಆ ದೇಶ ಯುದ್ಧಕ್ಕೆ ರೆಡಿಯಾಗುತ್ತಿದೆ ಎನ್ನಲಾಗುತ್ತಿದ್ದು, ಜಾಗತಿಕ ರಾಷ್ಟ್ರಗಳ ಒತ್ತಡ. ಅದರಿಂದಾಗುವ ಅಪಾಯದ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ಅಯಾತೊಲ್ಲಾ ಖೊಮೇನಿ ಅವರ ಸಲಹೆಗಾರರ ಆಪ್ತ ವ್ಯಕ್ತಿಯೊಬ್ಬರು ಹೇಳಿದ್ದಾರೆ ಎಂಬ ಮಾಹಿತಿ ಆಧರಿಸಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಇಸ್ರೇಲ್, ಗಾಜಾ ಪಟ್ಟಿ ಮತ್ತು ಹಮಾಸ್ ಉಗ್ರರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದರಿಂದ ಇರಾನ್ ದೇಶವು ಪದೇ ಪದೇ ಎಚ್ಚರಿಕೆ ಕೊಡುತ್ತಲೇ ಬಂದಿತ್ತು. ಇತ್ತೀಚೆಗೆ ಇರಾನ್ ದೇಶದ ವ್ಯಾಪ್ತಿಯ ಸಿರಿಯಾ ಭಾಗದ ಡಮಾಸ್ಕಸ್ ನಗರದ ಕಾನ್ಸುಲೇಟ್ ಒಂದಕ್ಕೆ ದಾಳಿ ನಡೆಸಲಾಗಿತ್ತು. ಅದರಲ್ಲಿ ಇರಾನ್ ದೇಶದ ಪ್ರಮುಖ ನಾಯಕ ಮತ್ತು ಆರು ಮಂದಿ ಮಿಲಿಟರಿ ವ್ಯಕ್ತಿಗಳು ಸಾವನ್ನಪ್ಪಿದ್ದರು.
ಡಮಾಸ್ಕಸ್ ಮೇಲಿನ ದಾಳಿಯನ್ನು ಇಸ್ರೇಲ್ ಮಾಡಿದೆ ಎಂದು ಇರಾನ್ ಆರೋಪ ಮಾಡಿತ್ತು. ಆದರೆ ಇಸ್ರೇಲ್ ಆ ದಾಳಿಯನ್ನು ನಿರಾಕರಿಸಿದ್ದೂ ಇಲ್ಲ, ಒಪ್ಪಿಕೊಂಡಿದ್ದೂ ಇಲ್ಲ. ಹೀಗಾಗಿ ಇಸ್ರೇಲ್ ಆ ದಾಳಿಯ ಹಿಂದೆ ಇದೆ ಎನ್ನುವ ಮಾತು ಮುಸ್ಲಿಂ ರಾಷ್ಟ್ರಗಳಿಂದ ಕೇಳಿಬಂದಿತ್ತು. ಇಸ್ರೇಲಿಗೆ ತಕ್ಕ ಶಿಕ್ಷೆ ಆಗಲೇಬೇಕು. ಅದು ಆಗಿಯೇ ತೀರುತ್ತೆ ಎಂದು ಡಮಾಸ್ಕಸ್ ದಾಳಿಯ ಬಳಿಕ ಇರಾನ್ ನಾಯಕ ಅಯೊತೊಲ್ಲಾ ಖೊಮೇನಿ ಹೇಳಿದ್ದರು.
ಇದೇ ವೇಳೆ, ಬಿಬಿಸಿ ಸಂಸ್ಥೆಯ ಯುಎಸ್ ಪಾಲುದಾರ ಸಿಬಿಎಸ್ ನ್ಯೂಸ್, ಇರಾನ್ ದಾಳಿ ಬಹುತೇಕ ಶುಕ್ರವಾರದ ಹೊತ್ತಿಗೆ ಆಗುವ ಸಾಧ್ಯತೆ ಇದೆಯೆಂದು ವರದಿ ಮಾಡಿದೆ. ನೂರಕ್ಕೂ ಹೆಚ್ಚು ಡ್ರೋಣ್, ಡಜನ್ ಗೂ ಹೆಚ್ಚು ಕ್ರೂಸ್ ಮಿಸೈಲ್ ಮತ್ತು ಬ್ಯಾಲಿಸ್ಟಿಕ್ ಮಿಸೈಲ್ ಇಸ್ರೇಲ್ ಮೇಲೆ ಟಾರ್ಗೆಟ್ ಮಾಡಲಿದೆ ಎಂದು ಅಮೆರಿಕದ ಇಬ್ಬರು ಸೇನಾಧಿಕಾರಿಗಳ ಹೇಳಿಕೆ ಅಧರಿಸಿ ಸಿಬಿಎಸ್ ನ್ಯೂಸ್ ವರದಿ ಮಾಡಿದೆ.
Iran is likely to launch a direct attack on Israel within the next 48 hours and the Jewish nation is preparing for it, according to a report. The Wall Street Journal reported on Friday, citing a person who had been briefed by the Iranian leadership.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am