ಬ್ರೇಕಿಂಗ್ ನ್ಯೂಸ್
13-04-24 08:49 pm H K News ದೇಶ - ವಿದೇಶ
ಕೋಜಿಕ್ಕೋಡ್, ಎ.13: ಸೌದಿ ಅರೇಬಿಯಾದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಕೇರಳದಲ್ಲಿ ಅಭಿಯಾನ ನಡೆಸುವ ಮೂಲಕ 34 ಕೋಟಿ ಹಣ ಒಟ್ಟು ಮಾಡಿ ಶಿಕ್ಷೆಯಿಂದ ಪಾರು ಮಾಡಲಾಗಿದೆ.
ಕೋಜಿಕ್ಕೋಡ್ ಮೂಲದ ನಿವಾಸಿ ಅಬ್ದುಲ್ ರಹೀಮ್ ಸೌದಿ ಅರೇಬಿಯಾದಲ್ಲಿ ಗಲ್ಲು ಶಿಕ್ಷೆಯಿಂದ ಪಾರಾಗಿ ಬಂದವರು. 18 ವರ್ಷಗಳಿಂದ ಜೈಲಿನಲ್ಲಿದ್ದ ಅಬ್ದುಲ್ ರಹೀಮ್ ಪರವಾಗಿ ಕೇರಳದಲ್ಲಿ ಬಹುದೊಡ್ಡ ಅಭಿಯಾನ ನಡೆಸಲಾಗಿತ್ತು. ಅಬ್ದುರ್ ರಹೀಂ 2006ರಲ್ಲಿ ಡ್ರೈವರ್ ವೀಸಾದಲ್ಲಿ ರಿಯಾದ್ ತೆರಳಿದ್ದರು. ಸೌದಿ ಕುಟುಂಬದ ಮನೆಯೊಂದರಲ್ಲಿ ಕಾರು ಚಾಲಕನಾಗಿದ್ದುಕೊಂಡು ಬುದ್ಧಿಮಾಂದ್ಯ ಬಾಲಕನನ್ನು ನೋಡಿಕೊಳ್ಳುವ ಜವಾಬ್ದಾರಿಯೂ ಜೊತೆಗಿತ್ತು. ಕಾರಿನಲ್ಲಿ ಬಾಲಕನ ಜೊತೆಗೆ ಪ್ರಯಾಣಿಸುತ್ತಿದ್ದಾಗ ಅಪಘಾತವಾಗಿದ್ದು, ಬಾಲಕನಿಗೆ ಇಡಲಾಗಿದ್ದ ಕೃತಕ ಉಸಿರಾಟದ ಮೆಷಿನ್ ಸಂಪರ್ಕ ಕಡಿತವಾಗಿತ್ತು. ರಕ್ಷಿಸಲು ಅಬ್ದುಲ್ ರಹೀಂ ಮಾಡಿದ ಪ್ರಯತ್ನ ಕೈಕೊಟ್ಟಿದ್ದರಿಂದ ಬಾಲಕ ಮೃತಪಟ್ಟಿದ್ದ. ಅದರಂತೆ, ರಹೀಮ್ ವಿರುದ್ಧ ದಾಖಲಾಗಿ ಸೌದಿ ಕಾನೂನು ಪ್ರಕಾರ ಜೈಲಿನಲ್ಲಿ ಇಡಲಾಗಿತ್ತು.
2018ರಲ್ಲಿ ಸೌದಿ ಕೋರ್ಟ್ ರಹೀಮ್ ಗೆ ಬಾಲಕನ ಸಾವಿಗೆ ಕಾರಣವಾಗಿದ್ದಕ್ಕೆ ಪ್ರತಿಯಾಗಿ ಗಲ್ಲು ಶಿಕ್ಷೆ ವಿಧಿಸಿತ್ತು. ಇದೇ ವೇಳೆ, ಬಾಲಕನ ಕುಟುಂಬಕ್ಕೆ ‘ಬ್ಲಡ್ ಮನಿ’ ರೂಪದಲ್ಲಿ 34 ಕೋಟಿ ಪರಿಹಾರ ಧನ ಪಾವತಿಸಿದಲ್ಲಿ ಗಲ್ಲು ಶಿಕ್ಷೆಯಿಂದ ಕಡಿತ ಮಾಡುವ ಪ್ರಸ್ತಾಪ ಇಡಲಾಗಿತ್ತು. ಹೀಗಾಗಿ ಲೀಗಲ್ ಏಕ್ಷನ್ ಕಮಿಟಿ ಹೆಸರಲ್ಲಿ ರಹೀಮ್ ಪರವಾಗಿ ಅಭಿಯಾನ ನಡೆಸಿದ್ದಕ್ಕೆ ಕೇರಳದ ಜನರು ಸ್ಪಂದಿಸಿದ್ದು ಹಣ ಹೊಂದಿಸುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.
ಸೇವ್ ಅಬ್ದುಲ್ ರಹೀಂ ಹೆಸರಲ್ಲಿ ಪ್ರತ್ಯೇಕ ಏಪ್ ಮಾಡಿ, ಹಣಕ್ಕಾಗಿ ಕ್ಯಾಂಪೇನ್ ಮಾಡಲಾಗಿತ್ತು. ಎನ್ಆರ್ ಐ ಉದ್ಯಮಿಗಳು, ಸಾಮಾಜಿಕ ಕಾರ್ಯಕರ್ತರು ಅಭಿಯಾನದ ಮುಂಚೂಣಿಯಲ್ಲಿದ್ದರಿಂದ ಹಣ ಹರಿದು ಬಂದಿತ್ತು. 34 ಕೋಟಿ ಹಣ ಒಟ್ಟಾಗುತ್ತಲೇ ಭಾರತೀಯ ವಿದೇಶಾಂಗ ಇಲಾಖೆಯ ಮೂಲಕ ಸೌದಿ ಅರೇಬಿಯಾದ ಇಂಡಿಯನ್ ಎಂಬಸ್ಸಿಗೆ ಹಣ ತಲುಪಿಸಲಾಗಿದೆ. ರಿಯಾದ್ ಜೈಲಿನಲ್ಲಿರುವ ಅಬ್ದುಲ್ ರಹೀಂ ತನ್ನೂರಿನ ಜನರು ಹಣ ಒಟ್ಟು ಮಾಡಿದ್ದರಿಂದ ಸಂತಸಗೊಂಡಿದ್ದು ಇದು ಒರಿಜಿನಲ್ ಕೇರಳ ಸ್ಟೋರಿ ಎಂದು ಪ್ರತಿಕ್ರಿಯಿಸಿದ್ದಾರೆ.
The deadline loomed like the sword of Damocles but an astonishing four days is all it took for people in Kerala to channel their compassion and rally together to raise an astounding ₹34 crore to save a man from the state from the gallows in Saudi Arabia.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm