ಬ್ರೇಕಿಂಗ್ ನ್ಯೂಸ್
16-04-24 07:50 pm HK News Desk ದೇಶ - ವಿದೇಶ
ನವದೆಹಲಿ, ಎ.16: ಛತ್ತೀಸ್ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ 18 ಮಂದಿ ನಕ್ಸಲರನ್ನು ಬಿಎಸ್ಎಫ್ ಭದ್ರತಾ ಪಡೆಗಳು ಗುಂಡಿಟ್ಟು ಹತ್ಯೆಗೈದ ಘಟನೆ ನಡೆದಿದೆ. ಮೂವರು ಭದ್ರತಾ ಸಿಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮೃತರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದ್ದಾನೆ. ಆತನ ತಲೆಗೆ ಛತ್ತೀಸ್ಗಢ ರಾಜ್ಯ ಸರಕಾರ 25 ಲಕ್ಷ ಬಹುಮಾನ ಘೋಷಿಸಿತ್ತು. ಬೈನಗೊಂಡ ಮತ್ತು ಕೊರೊನಾರ್ ಗ್ರಾಮದ ಹಪತೋಲ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಿಎಸ್ಎಫ್ ಯೋಧರು ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಬಿಎಸ್ಎಫ್ ಪಡೆಯನ್ನು ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.

ಎನ್ಕೌಂಟರ್ ನಡೆದ ಸ್ಥಳದಲ್ಲಿ 18 ಮಂದಿ ಮಾವೋವಾದಿ ನಕ್ಸಲರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಏಳು ಎಕೆ -47 ರೈಫಲ್ ಮತ್ತು ಮೂರು ಮೆಶಿನ್ ಗನ್ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಿಎಸ್ಎಫ್ ಯೋಧರ ಕಾಲಿಗೆ ಗುಂಡೇಟು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಎಸ್ಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಂಕೇರ್ ಜಿಲ್ಲೆಯಲ್ಲಿ ಎ.26ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಕ್ಸಲರು ಅಲರ್ಟ್ ಆಗಿದ್ದರು. ಜನರಲ್ಲಿ ಭಯ ಹುಟ್ಟಿಸಿ ಚುನಾವಣೆಯಲ್ಲಿ ಸಕ್ರಿಯವಾಗದಂತೆ ಯತ್ನ ಮಾಡಿದ್ದರು. ಹೀಗಾಗಿ ರಾಜ್ಯ ಪೊಲೀಸರು ಮತ್ತು ಬಿಎಸ್ಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
At least twenty-nine Naxalites were killed in an encounter with the police in Chhattisgarh's Kanker district on Tuesday, the Border Security Force said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm