ಬ್ರೇಕಿಂಗ್ ನ್ಯೂಸ್
17-04-24 07:07 pm HK News Desk ದೇಶ - ವಿದೇಶ
ಗಾಂಧಿನಗರ, ಏ.17: ಗುಜರಾತ್ನ ಖೇಡಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನದಿಯಾಡ್ ನಗರದ ಬಳಿಯ ಅಹಮದಾಬಾದ್-ವಡೋದರ ಎಕ್ಸ್ಪ್ರೆಸ್ವೇನಲ್ಲಿ ಟ್ರಕ್ಗೆ ಕಾರು ಗುದ್ದಿದ್ದು, ಕಾರಿನಲ್ಲಿದ್ದ ಎಲ್ಲ 10 ಜನ ಮೃತಪಟ್ಟಿದ್ದಾರೆ.
ವಡೋದರದಿಂದ ಎರ್ಟಿಗಾ ಕಾರು ಅಹಮದಾಬಾದ್ಗೆ ತೆರಳುತ್ತಿತ್ತು. ವೇಗವಾಗಿ ಚಲಿಸುವ ವೇಳೆ, ಹೈವೇ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಟ್ರಕ್ಗೆ ಹಿಂಬದಿಯಿಂದ ಗುದ್ದಿದೆ. ರಭಸವಾಗಿ ಚಲಿಸುತ್ತಿದ್ದ ಕಾರು ನಿಂತಿದ್ದ ಟ್ರಕ್ಗೆ ಗುದ್ದಿದ ಪರಿಣಾಮ ಕಾರ್ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. 8 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂಬುದಾಗಿ ನದಿಯಾಡ್ ಗ್ರಾಮೀಣ ಪೊಲೀಸ್ ಸ್ಟೇಷನ್ ಇನ್ಸ್ಪೆಕ್ಟರ್ ಕಿರಿತ್ ಚೌಧರಿ ಮಾಹಿತಿ ನೀಡಿದ್ದಾರೆ.
ಅಹಮದಾಬಾದ್ಗೆ ತೆರಳುತ್ತಿದ್ದ ಟ್ರಕ್ ಎಕ್ಸ್ಪ್ರೆವೇನ ಎಡ ಭಾಗದಲ್ಲಿ ನಿಂತಿತ್ತು. ತಾಂತ್ರಿಕ ಸಮಸ್ಯೆಯಿಂದಾಗಿ ಟ್ರಕ್ಅನ್ನು ನಿಲ್ಲಿಸಲಾಗಿತ್ತು. ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಟ್ರಕ್ ಸಮೀಪ ಬಂದಾಗ ಏಕಾಏಕಿ ನಿಲ್ಲಿಸಲಾಗದೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸುತ್ತಲೇ ಹೆದ್ದಾರಿ ಪ್ಯಾಟ್ರೋಲಿಂಗ್ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ, ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಎರಡು ಆಂಬುಲೆನ್ಸ್ಗಳನ್ನೂ ಕರೆಸಿ, ಗಾಯಾಳುಗಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರಿನಲ್ಲಿದ್ದ ಒಬ್ಬರೂ ಬದುಕುಳಿಯಲಿಲ್ಲ. ಭೀಕರ ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್ಪ್ರೆಸ್ವೇನಲ್ಲಿ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
अहमदाबाद बडौदा एक्सप्रेस वे पर नडियाद के पास सडक हादसा हुआ,
— Bharat J Panchal (@bjpanchal64) April 17, 2024
10 लोगो की मौत#Ahmedabad #Vadodara #Accident #Gujarat #Expressway pic.twitter.com/xGajFxATJL
A terrible road accident has occurred in Kheda district of Gujarat. A car rammed into a truck on the Ahmedabad-Vadodara Expressway near Nadiad Nagar, killing all 10 people in the car. The over speeding car hit the truck from behind causing the car to be completely mangled. The police informed that 8 people died on the spot due to the severity of the accident, while two others died on the way to the hospital.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am