ಬ್ರೇಕಿಂಗ್ ನ್ಯೂಸ್
02-12-20 11:15 am Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಡಿ.2 : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎಂಟು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಾವಿಗೆ ಕಾರಣವಾದ ಅಂಶಗಳ ಪತ್ತೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಿದ್ದಾರೆ.
ಆಸ್ಪತ್ರೆಯ ಅಸ್ವಸ್ಥ ನವಜಾತ ಶಿಶು ಆರೈಕೆ ಘಟಕ ಮತ್ತು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ಮಕ್ಕಳು ಬುಡಕಟ್ಟು ಜನಾಂಗದವರೇ ಅಧಿಕ ಇರುವ ಶಾಡೋಲ್, ಉಮರಿಯಾ ಮತ್ತು ಅನುಪ್ಪೂರ್ ಜಿಲ್ಲೆಗೆ ಸೇರಿದವರು.
ಅನಿಯಂತ್ರಿತ ನ್ಯುಮೋನಿಯಾ ಮತ್ತು ಉಸಿರಾಟದ ಸಂಕೀರ್ಣತೆಗಳಿಂದ ಬಹುತೇಕ ಮಕ್ಕಳು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಹೇಳಿದ್ದಾರೆ.
"ಮುಖ್ಯಮಂತ್ರಿ ಆದೇಶದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಹಮ್ಮದ್ ಸುಲೈಮಾನ್ ಅವರಿಗೆ ಶಾಡೋಲ್ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಎಂದು ಪತ್ತೆ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗತ್ಯವಿದ್ದಲ್ಲಿ ಜಬಲ್ಪುರದಿಂದ ಶಾಡೋಲ್ಗೆ ತಜ್ಞ ವೈದ್ಯರನ್ನು ಕಳುಹಿಸುವಂತೆಯೂ ಅವರು ಸಲಹೆ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಆರು ದಿನದಿಂದ ಆರು ತಿಂಗಳು ಪ್ರಾಯದ ಆರು ಬುಡಕಟ್ಟು ಮಕ್ಕಳು ಇದೇ ಆಸ್ಪತ್ರೆಯಲ್ಲಿ 15 ಗಂಟೆಯೊಳಗೆ ಮೃತಪಟ್ಟಿದ್ದವು.
As many as eight infants died during treatment at the district hospital at Shahdol in Madhya Pradesh in the last four days, prompting the state government to launch an inquiry, officials said on Tuesday.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 04:57 pm
Mangalore Correspondent
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm