ಬ್ರೇಕಿಂಗ್ ನ್ಯೂಸ್
24-04-24 05:01 pm HK News Desk ದೇಶ - ವಿದೇಶ
ರಾಜಸ್ಥಾನ, ಏ.24: ಇನ್ನೇನು ಕೆಲವೇ ಗಂಟೆಯಲ್ಲಿ ಹಸೆಮಣೆ ಏರಬೇಕಿದ್ದ ವರನೋರ್ವ ಮದುವೆಯ ಮೊದಲ ನಡೆಯುವ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶಿಸಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾ ನಗರದ ನಂಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೂಲತಃ ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ (30) ಎಂದು ಗುರುತಿಸಲಾಗಿದೆ.

ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ ಅವರ ವಿವಾಹ ಏಪ್ರಿಲ್ 24 ರಂದು ನಿಶ್ಚಯವಾಗಿತ್ತು ಅದರಂತೆ ಬುಧವಾರ ಬಂಡಿ ರಸ್ತೆಯಲ್ಲಿರುವ ಮೆನಾಲ್ ರೆಸಿಡೆನ್ಸಿ ರೆಸಾರ್ಟ್ನಲ್ಲಿ ವಿವಾಹ ಸಮಾರಂಭ ಆಯೋಜಿಸಲಾಗಿತ್ತು, ಈ ಶುಭ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆದಿತ್ತು ಅದರಂತೆ ಸೋಮವಾರ ಮದುವೆಯ ಮೊದಲ ಶಾಸ್ತ್ರವಾದ ಹಳದಿ ಶಾಸ್ತ್ರ ನಡೆಯುತ್ತಿತ್ತು ಈ ವೇಳೆ ಹಳದಿ ಸಂಭ್ರಮದಲ್ಲಿದ್ದ ವರ ಅಲ್ಲೇ ಇದ್ದ ಈಜುಕೊಳದ ಬಳಿ ನಡೆದುಕೊಂಡು ಹೋಗಿದ್ದಾನೆ ಅಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದ ಕಬ್ಬಿಣದ ಕಂಬವನ್ನು ಮುಟ್ಟಿದ್ದಾನೆ ಈ ವೇಳೆ ಆತನಿಗೆ ಒಮ್ಮೆಲೇ ವಿದ್ಯುತ್ ಶಾಕ್ ಹೊಡೆದು ಕುಸಿದು ಬಿದ್ದಿದ್ದಾನೆ ಇದನ್ನು ಕಂಡ ಅಲ್ಲಿದ್ದವರು ಓಡಿ ಬಂದು ಸೂರಜ್ ನನ್ನು ಉಪಚರಿಸಿದ್ದಾರೆ ಆದರೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಸೂರಜ್ ಪ್ರಜ್ಞೆ ತಪ್ಪಿದ್ದ, ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟೋತ್ತಿಗಾಗಲೇ ಸೂರಜ್ ಪ್ರಾಣ ಪಕ್ಷಿ ಹಾರಿಹೋಗಿತ್ತು,
ಇತ್ತ ಸೂರಜ್ ಮೃತಪಟ್ಟ ವಿಚಾರ ತಿಳಿಯುತ್ತಲೇ ಕುಟುಂಬದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ ಅಷ್ಟು ಮಾತ್ರವಲ್ಲದೆ ವಧುವಿನ ಮನೆಯಲ್ಲೂ ನೀರವ ಮೌನ ಆವರಿಸಿದೆ.
ಮದುವೆಯ ಸಂಭ್ರಮದಲ್ಲಿದ್ದ ಎರಡೂ ಮನೆಯಲ್ಲೂ ನೀರವ ಮೌನ, ಬದುಕಿ ಬಾಳಬೇಕಿದ್ದ ಜೀವ ಸಣ್ಣ ವಯಸ್ಸಿನಲ್ಲೇ ಕೊನೆಗೊಂಡಿದ್ದು ವಿಧಿಯ ವಿಪರ್ಯಾಸವೇ ಸರಿ. ಘಟನೆ ಸಂಬಂಧ ನಂಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Just hours before tying the nuptial knot, a 30-year-old man died of an electric shock during his ‘haldi’ ceremony in a hotel here on Tuesday, police said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am