ಬ್ರೇಕಿಂಗ್ ನ್ಯೂಸ್
26-04-24 02:58 pm HK News Desk ದೇಶ - ವಿದೇಶ
ಬಿಹಾರ, ಏ 26: ಬೆಂಕಿ ಅನಾಹುತದಿಂದ ಮದುವೆ ಮನೆ ಅಕ್ಷರಶಃ ಶೋಕದ ಮನೆಯಾಗಿ ಮಾರ್ಪಟ್ಟಿರುವ ಘಟನೆ ನಡೆದಿದೆ. ಮದುವೆ ಮೆರವಣಿಗೆ ಸಂಭ್ರಮದಲ್ಲಿ ಹಚ್ಚಿದ್ದ ಪಟಾಕಿ ಕಿಡಿಯಿಂದ ಆದ ಅಗ್ನಿ ಅನಾಹುತದಲ್ಲಿ ಮೂರು ಜಾನುವಾರು, ನವ ದಂಪತಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ದರ್ಬಾಂಗ್ನಲ್ಲಿ ನಡೆದಿದೆ.
ಗುರುವಾರ ರಾತ್ರಿ ಮದುವೆ ಮೆರವಣಿಗೆ ಹಿನ್ನೆಲೆ ಸಂಭ್ರಮದಿಂದ ಪಟಾಕಿ ಹೊಡೆಯಲಾಗಿದ್ದು, ಈ ಬೆಂಕಿ ಕಿಡಿ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೆ ಬಿದ್ದ ಪರಿಣಾಮ ಈ ಭಾರಿ ಅನಾಹುತ ಸಂಭವಿಸಿದೆ. ಘಟನೆ ಬೆಳಕಿಗೆ ಬಂದಾಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿ ಶಾಮಕದಳ ಕೂಡ ಬೆಂಕಿ ಆರಿಸುವ ಯತ್ನದಲ್ಲಿ ನಿರತರವಾಯಿತು.
ಬಹೇರಾ ಪೊಲೀಸ್ ಠಾಣೆಯ ಅಂತೋರ್ ಗ್ರಾಮದಲ್ಲಿ ಛಗನ್ ಪಾಸ್ವಾನ್ ಅವರ ಮಗಳ ಮದುವೆ ಸಮಾರಂಭ ಅದ್ದೂರಿಯಾಗಿ ಏರ್ಪಡಿಸಲಾಗಿತ್ತು. ಸಮಾರಂಭದ ಹಿನ್ನೆಲೆ ಮನೆಯ ಪಕ್ಕದಲ್ಲಿ ಅತಿಥಿಗಳು ತಂಗಲು ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು. ಗುರುವಾರ ರಾತ್ರಿ ಮದುವೆ ದಿಬ್ಬಣ ಬಂದಿದ್ದು, ಅದ್ದೂರಿಯಾಗಿ ಸಂಭ್ರಮಾಚರಣೆ ಸಾಗಿತ್ತು. ಈ ವೇಳೆ ಪಟಾಕಿ ಹೊಡೆಯಾಗಿದ್ದು, ಇದರ ಕಿಡಿ ಹಾಕಿದ್ದ ಶಾಮೀಯಾನದ ಮೇಲೆ ಬಿದ್ದ ಪರಿಣಾಮ ಇಡೀ ಟೆಂಟ್ ಹೊತ್ತಿ ಉರಿದಿದೆ. ಈ ವೇಳೆ ಅಲ್ಲಿಯೇ ಇದ್ದ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೂ ಕಿಡಿ ತಗುಲಿದ್ದು, ಭಾರೀ ಅನಾಹುತ ಸಂಭವಿಸಿತು. ನವ ದಂಪತಿ ಸೇರಿ 6 ಮಂದಿ ಸಜೀವ ದಹನ ಆಗಿದ್ದಾರೆ.
ದುರ್ಘಟನೆ ತಿಳಿದಾಕ್ಷಣ ಗ್ರಾಮಸ್ಥರು ಆಗಮಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಮಾಡಿದರು. ಆದರೆ, ಸಿಲಿಂಡರ್ ಮತ್ತು ಡೀಸೆಲ್ ಗೆ ಕಿಡಿ ತಗುಲಿದ ಹಿನ್ನಲೆ ಬೆಂಕಿ ಕೆನ್ನಾಲಿಗೆ ಚಾಚಿತು. ಇದರಿಂದ ಮೂರು ಜಾನುವಾರು ಸೇರಿದಂತೆ 6 ಮಂದಿಯನ್ನ ರಕ್ಷಿಸುವ ಯತ್ನವೂ ವಿಫಲವಾಯಿತು.
At least six people were killed and six others injured after a cylinder exploded during a wedding ceremony in Bihar’s Darbhanga on Thursday night, police said on Friday. The incident took place after a major blaze erupted due to bursting fireworks at the wedding in Antor village of the Bahera police station area, they said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am