ಬ್ರೇಕಿಂಗ್ ನ್ಯೂಸ್
27-04-24 05:46 pm HK News Desk ದೇಶ - ವಿದೇಶ
ನವದೆಹಲಿ, ಎ.27: ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಕರ್ನಾಟಕ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎ.26ರ ಶುಕ್ರವಾರ ಮತದಾನ ನಡೆದಿತ್ತು. ತಿಂಗಳ ಹಿಂದೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್, ಬರ ಪರಿಹಾರ ವಿಚಾರದಲ್ಲಿ ವಿಳಂಬ ತೋರಿದ್ದಕ್ಕೆ ಛೀಮಾರಿ ಹಾಕಿತ್ತು. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿದ್ದರಿಂದ 2023ರ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ 18,172 ಕೋಟಿ ಹಣದ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸುತ್ತಿದ್ದರು.
ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶ ಮಾಡಲಾಗಿತ್ತು. ಕಳೆದ ವಾರ ಕೇಂದ್ರ ಸರ್ಕಾರದ ಪರ ವಕೀಲರು ಪರಿಹಾರ ಬಿಡುಗಡೆ ಮಾಡುವುದಾಗಿ ಕೋರ್ಟ್ನಲ್ಲಿ ಒಪ್ಪಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರ ಚುನಾವಣೆ ನಡುವಲ್ಲೇ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.
The Centre has released Rs 3,454 crore to Karnataka to take up its drought relief works.
09-05-24 11:39 am
Bengaluru Correspondent
SSLC Result 2024, Online: ಮೇ 9ಕ್ಕೆ SSLC ಫಲಿತಾ...
08-05-24 04:37 pm
C P Yogeshwara slams Dk Shivakumar: ಬಾಲ್ಯದಲ್ಲ...
08-05-24 04:28 pm
ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರ...
08-05-24 01:03 pm
DK Shivakumar, HD Kumarasway, Prajwal case:...
07-05-24 09:11 pm
09-05-24 11:56 am
HK News Desk
ಸೈಡ್ ಇಫೆಕ್ಟ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ;...
08-05-24 11:59 am
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
Cyber crime, gold biscut: ಸೈಬರ್ ವಂಚಕನಿಗೆ ಸೇರಿ...
07-05-24 10:26 pm
Solapur Lok Sabha Constituency, Maharashtra,...
07-05-24 08:38 pm
08-05-24 10:48 pm
Mangalore Correspondent
Mangalore Vasantha Bangera death: ವಸಂತ ಬಂಗೇರ...
08-05-24 10:37 pm
Explosion at firecracker: ಕಾರ್ಕಳ ; ಸಿಡಿಮದ್ದು...
08-05-24 08:44 pm
Mangalore suicide, College student: ಬಿಇ ಇಂಜಿನ...
08-05-24 08:11 pm
Congress Vasantha Bangera death: ಬೆಳ್ತಂಗಡಿಯ ಹ...
08-05-24 06:19 pm
09-05-24 10:59 am
Mangalore Correspondent
Shivamogga double murder: ಶಿವಮೊಗ್ಗದಲ್ಲಿ ಹಾಡಹಗ...
09-05-24 10:54 am
HD Revanna Sent To Jail; ಎಚ್.ಡಿ ರೇವಣ್ಣ ಎಸ್ಐಟಿ...
08-05-24 04:35 pm
ಹಲ್ಲಿನ ಚಿಕಿತ್ಸೆಗೆ ಬಂದು ಮೆಡಿಕಲ್ ಕಾಲೇಜಿನ ಟಾಯ್ಲೆ...
08-05-24 11:33 am
ಆನ್ಲೈನ್ ಗೇಮಿಂಗ್ ಗಾಗಿ 2 ಸಾವಿರ ರೂ. ಸಾಲ, ದುಡ್ಡ...
07-05-24 10:03 pm