ಬ್ರೇಕಿಂಗ್ ನ್ಯೂಸ್
30-04-24 11:02 pm HK News Desk ದೇಶ - ವಿದೇಶ
ನವದೆಹಲಿ, ಎ.30: ಅಬಕಾರಿ ನೀತಿ ಅವ್ಯವಹಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಲೋಕಸಭಾ ಚುನಾವಣೆ ವೇಳೆಯಲ್ಲಿ ಬಂಧಿಸಿದ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.
ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ನ್ಯಾಯಪೀಠವು ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರನ್ನು ಈ ಕುರಿತು ಪ್ರಶ್ನೆ ಮಾಡಿದ್ದು, ಸಾಕ್ಷಿದಾರರ ಹೇಳಿಕೆ ಅನುಸರಿಸಿ ಬಂಧಿಸುವುದಾದರೆ ಕಳೆದ ಜೂನ್ ತಿಂಗಳಲ್ಲಿಯೇ ಬಂಧಿಸಬೇಕಿತ್ತು. ಯಾಕೆ ಮಾರ್ಚ್ ತಿಂಗಳ ವರೆಗೆ ಕಾಯಬೇಕಿತ್ತು. ಇಡಿಯವರು ಲೋಕಸಭೆ ಚುನಾವಣೆ ಎದುರಾದ ಸಂದರ್ಭದಲ್ಲಿಯೇ ಯಾಕೆ ಬಂಧಿಸಬೇಕಾಯಿತು ಎಂದು ಪ್ರಶ್ನೆ ಮಾಡಿದೆ.
ಬದುಕು ಮತ್ತು ಸ್ವಾತಂತ್ರ್ಯ ಮನುಷ್ಯನ ಮೂಲಭೂತ ಹಕ್ಕು, ಅದನ್ನು ನೀವು ನಿರಾಕರಿಸುವಂತಿಲ್ಲ. ಜನರಲ್ ಇಲೆಕ್ಷನ್ ಘೋಷಣೆ ಆದ ಹೊತ್ತಲ್ಲೇ ನೀವು ಯಾಕೆ ಅರೆಸ್ಟ್ ಮಾಡಿದ್ರಿ ಎಂದು ಜಾರಿ ನಿರ್ದೇಶನಾಲಯದ ಕ್ರಮವನ್ನು ಕೋರ್ಟ್ ಪ್ರಶ್ನೆ ಮಾಡಿದೆ. ಇಬ್ಬರು ನ್ಯಾಯಾಧೀಶರ ಪೀಠವು ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದು, ಸೋಮವಾರದಿಂದ ಮುಂದಿನ ಶುಕ್ರವಾರದ ವರೆಗೂ ಪ್ರತಿದಿನ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಅರವಿಂದ ಕೇಜ್ರಿವಾಲ್ ಬಂಧನ ಕ್ರಮವನ್ನು ಪ್ರಶ್ನಿಸಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಸುಪ್ರೀಂ ಕೋರ್ಟಿನಲ್ಲಿ ಚಾಲೆಂಜ್ ಮಾಡಿದ್ದಾರೆ. ಸೋಮವಾರ ಈ ಕುರಿತು ವಾದ- ಪ್ರತಿವಾದ ನಡೆದಿದ್ದು, ನೀವು ಯಾಕೆ ಕೇಜ್ರಿವಾಲ್ ಪರವಾಗಿ ಜಾಮೀನು ಅರ್ಜಿ ಸಲ್ಲಿಸಿಲ್ಲ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿತ್ತು. ಬಂಧನ ಕ್ರಮವೇ ತಪ್ಪು. ಹಾಗಾಗಿ ಜಾಮೀನು ಅರ್ಜಿ ಹಾಕಿಲ್ಲ ಎಂದು ಸಿಂಘ್ವಿ ಸಮರ್ಥನೆ ಮಾಡಿದ್ದಾರೆ.
ಯಾರೋ ಸಾಕ್ಷಿದಾರರು ನೀಡಿದ ಹೇಳಿಕೆ ಅನುಸರಿಸಿ ಬಂಧಿಸಿದ್ದಾರೆಂದು ಇಡಿಯವರು ಹೇಳುತ್ತಿದ್ದಾರೆ. ಸಾಕ್ಷಿಯವರು ಹೇಳಿ ಬಂಧಿಸುವುದಿದ್ದರೆ, ಹತ್ತು ತಿಂಗಳು ಮೊದಲೇ ಬಂಧನ ಮಾಡಬೇಕಿತ್ತು. ಈಗ ಯಾಕೆ ಮಾಡಿದ್ದಾರೆ. ಸಮನ್ಸ್ ನೀಡಿದ ಮಾತ್ರಕ್ಕೆ ಅಪರಾಧ ಸಾಬೀತು ಪಡಿಸಿದಂತೆ ಆಗಲ್ಲ. ಸಮನ್ಸ್ ವಿಚಾರಣೆಗಷ್ಟೇ ಕರೆಯುವುದು. ಕೇಜ್ರಿವಾಲ್ ಭಯೋತ್ಪಾದಕ ಕೃತ್ಯ ಮಾಡಿದ್ದಾರೆಯೇ.. ದೇಶ ವಿರೋಧಿ ಕೃತ್ಯ ಎಸಗಿ ವಿದೇಶಕ್ಕೆ ಪರಾರಿಯಾಗಿದ್ದಾರೆಯೇ.. ಮುಖ್ಯಮಂತ್ರಿಯಾಗಿರುವ ವ್ಯಕ್ತಿಯನ್ನು ಬಂಧಿಸಿಡುವ ಪ್ರಮೇಯ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಮಾರ್ಚ್ 21ರಂದು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಬಂಧನ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸದ ಕಾರಣ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆನಂತರ, ಎಪ್ರಿಲ್ 1ರಂದು ಕೇಜ್ರಿವಾಲನ್ನು ಇಡಿ ಕಸ್ಟಡಿಗೆ ಪಡೆದಿದ್ದು ಮೇ 7ರ ವರೆಗೂ ತನಿಖೆಗಾಗಿ ಕಸ್ಟಡಿಯಲ್ಲಿ ಇಟ್ಟುಕೊಂಡಿದೆ. ಸದ್ಯಕ್ಕೆ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
Supreme Court on Tuesday questioned financial probe agency Enforcement Directorate (ED) about the timing of Aam Aadmi Party (AAP) chief and Delhi Chief Minister Arvind Kejriwal’s arrest. Seeking a response, the court asked why the arrest was made just before the Lok Sabha election, 2024.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm