ಬ್ರೇಕಿಂಗ್ ನ್ಯೂಸ್
01-05-24 03:57 pm HK News Desk ದೇಶ - ವಿದೇಶ
ಮುಂಬೈ , ಮೇ 1: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್ನನ್ನು ಏಪ್ರಿಲ್ 26 ರಂದು ಪಂಜಾಬ್ನಲ್ಲಿ ಬಂಧಿಸಲಾಗಿತ್ತು. ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಮುಂಬೈ ಮನೆಯ ಹೊರಗೆ ಫೈರಿಂಗ್ ಮಾಡಲು ಬಳಸಲಾದ ಶಸ್ತ್ರಾಸ್ತ್ರಗಳನ್ನು ಅನುಜ್ ಥಾಪನ್ ಒದಗಿಸಿದ ಆರೋಪವಿದೆ. ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್ಸೈಕಲ್ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
Anuj Thapan, an accused arrested in the Bollywood actor Salman Khan house firing case, died in a hospital after he tried to commit suicide in Mumbai Police custody on Wednesday.The deceased Anuj Thapan, 23, hanged himself inside the toilet of the lock-up using a bedsheet. He was rushed to the state-run GT Hospital, where he was declared dead during treatment, news agency PTI quoted an official as saying.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm