ಬ್ರೇಕಿಂಗ್ ನ್ಯೂಸ್
02-05-24 10:07 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮೇ.2: ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಭಾರತದ ರಾಹುಲ್ ಗಾಂಧಿ ಅವರನ್ನು ಪ್ರಶಂಸಿಸಿ ಹೇಳಿಕೆ ನೀಡಿರುವುದನ್ನು ಚುನಾವಣಾ ಪ್ರಚಾರ ಭಾಷಣದಲ್ಲಿ ಅಣಕಿಸಿದ ಪ್ರಧಾನಿ ಮೋದಿ, ಈ ಮೂಲಕ ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ನಂಟು ಹೊಂದಿರುವುದನ್ನು ಜಗತ್ತಿಗೆ ತೋರಿಸಿದೆ. ಕಾಂಗ್ರೆಸ್ ಇಲ್ಲಿ ದುರ್ಬಲವಾಗುತ್ತಿದ್ದರೆ, ಪಾಕಿಸ್ಥಾನ ರಾಹುಲ್ ಗಾಂಧಿ ಪ್ರಧಾನಿಯಾಗಲು ಬಯಸುತ್ತಿದೆ ಎಂದು ಕುಟುಕಿದ್ದಾರೆ.
ಕಾಕತಾಳೀಯ ನೋಡಿ, ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆ ಏನಂದ್ರೆ, ಇಲ್ಲಿ ಕಾಂಗ್ರೆಸ್ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಾ ಇದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಕಾಂಗ್ರೆಸಿನ ಯುವರಾಜನನ್ನು ಪ್ರಧಾನಿಯಾಗಿ ಕಾಣಲು ಪಾಕಿಸ್ತಾನಿ ನಾಯಕರು ಹಂಬಲಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಕಾಂಗ್ರೆಸಿನ ನಂಟನ್ನು ನಾವು ಮೊದಲೇ ಅರಿತಿದ್ದೆವು. ಇವರ ಹೇಳಿಕೆಯಿಂದಾಗಿ ಇವರೊಳಗಿನ ಬಾಂಧವ್ಯ ಹೊರಜಗತ್ತಿಗೆ ತಿಳಿಯುವಂತಾಯಿತು ಎಂದು ಗುಜರಾತಿನ ಆನಂದ್ ನಲ್ಲಿ ಮೋದಿ ಪ್ರಚಾರ ಭಾಷಣದಲ್ಲಿ ಹೇಳಿದ್ದಾರೆ.
ದುರ್ಬಲ ಕಾಂಗ್ರೆಸ್ ಸರಕಾರ ಇದ್ದಾಗ ಉಗ್ರವಾದಿಗಳ ಬಗ್ಗೆ ಮೃದು ಧೋರಣೆ ತಾಳಿತ್ತು. ಆದರೆ ಬಲಿಷ್ಠ ಮೋದಿ ಸರಕಾರ ಬಂದ ಬಳಿಕ ಉಗ್ರರನ್ನು ಅದೇ ನೆಲದಲ್ಲಿ ಕೊಲ್ಲುತ್ತಾ ಬಂದಿದೆ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ರಾಹುಲ್ ಗಾಂಧಿ ಮೋದಿ ಕುರಿತಾಗಿ ಮಾಡಿದ್ದ ಭಾಷಣವನ್ನು ಕೊಂಡಾಡಿದ್ದರು. ಭಾರತದ ಪ್ರಸಕ್ತ ಸ್ಥಿತಿಯನ್ನು ರಾಹುಲ್ ಗಾಂಧಿ ತೋರಿಸಿದ್ದಾರೆ ಎಂದಿದ್ದರು. ಈ ಬಗ್ಗೆ ನೀವು ರಾಹುಲ್ ಗಾಂಧಿಯನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಬೆಂಬಲಿಸುತ್ತೇವೆ, ಆದರೆ ಸರಿಯಾದ ವಿಚಾರ ಇರಬೇಕು ಅಷ್ಟೇ ಎಂದಿದ್ದರು.
Prime Minister Narendra Modi on Thursday reacted to former Pakistan minister Fawad Chaudhry’s words of praise for Congress leader Rahul Gandhi said that this has exposed “partnership” between Pakistan and Congress. Addressing a public rally in Gujarat’s Anand, Modi said Pakistani leaders are praying for Congress when the party is getting weak in India and they want to make Rahul Gandhi the prime minister.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am