ಬ್ರೇಕಿಂಗ್ ನ್ಯೂಸ್
03-05-24 10:58 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮೇ.3: ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ರಾಜಭವನದಲ್ಲಿ ಕೆಲಸಕ್ಕಿರುವ ಮಹಿಳೆಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಆರೋಪ ಕೇಳಿಬಂದಿರುವುದು ಟಿಎಂಸಿ ಮತ್ತು ಬಿಜೆಪಿ ನಡುವೆ ಗಂಭೀರ ಕೆಸರೆರಚಾಟಕ್ಕೆ ಕಾರಣವಾಗಿದೆ.
ಮಹಿಳೆ ನೀಡಿದ ದೂರಿನಲ್ಲಿ ಎಪ್ರಿಲ್ 19ರಂದು ಮೊದಲ ಬಾರಿಗೆ ಗವರ್ನರ್ ನನ್ನನ್ನು ಅವರ ಕಚೇರಿಗೆ ಬರಲು ಹೇಳಿದ್ದರು. ಎಪ್ರಿಲ್ 24ರಂದು ಮಧ್ಯಾಹ್ನ ಕಚೇರಿಗೆ ತೆರಳಿದ್ದಾಗ, ಮುಟ್ಟ ಬಾರದ ಜಾಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದರು. ಬೋಸ್ ಆನಂತರ ಕರೆ ಮಾಡಿ, ಮೇ 2ರಂದು ಕಚೇರಿಗೆ ಬರಲು ಹೇಳಿದ್ದರು. ಹೆದರಿಕೆಯಿಂದಾಗಿ ಮೇಲಧಿಕಾರಿಯ ಜೊತೆಗೆ ಅವರ ಚೇಂಬರಿಗೆ ಹೋಗಿದ್ದೆ. ಮೇಲಧಿಕಾರಿ ಹೊರ ಹೋದ ಬಳಿಕ ನನ್ನ ಗಲ್ಲವನ್ನು ಮುಟ್ಟಿ ಪ್ರಮೋಷನ್ ನೀಡುವುದಾಗಿ ಹೇಳಿ ಕಿರುಕುಳ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿಂದೆಯೂ ರಾಜಭವನ ಕಚೇರಿಯಲ್ಲಿ ಮಹಿಳೆಯೊಬ್ಬರು ಇದೇ ರೀತಿಯ ಆರೋಪವನ್ನು ಮಾಡಿದ್ದರು. ನಾನು ಕಂಟ್ರಾಕ್ಟ್ ಆಧಾರದಲ್ಲಿ ಕೆಲಸಕ್ಕಿರುವುದರಿಂದ ದೂರು ನೀಡುವುದಕ್ಕೆ ಹೆದರಿದ್ದೆ. ಕೆಲಸ ಕಳಕೊಳ್ಳುವ ಭಯದಲ್ಲಿ ದೂರು ನೀಡಿರಲಿಲ್ಲ ಎಂದು ಮಹಿಳೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿದ್ದು, ಎಫ್ಐಆರ್ ದಾಖಲು ಮಾಡಿಲ್ಲ. ರಾಜ್ಯಪಾಲರ ವಿರುದ್ಧ ಪೊಲೀಸರಿಗೆ ಕೇಸು ದಾಖಲಿಸುವ ಅಧಿಕಾರ ಇರುವುದಿಲ್ಲ. ರಾಜಭವನದ ಸಂಪೂರ್ಣ ಅಧಿಕಾರ ರಾಜ್ಯಪಾಲರಿಗೆ ಇರುತ್ತದೆ. ರಾಜಭವನ ವ್ಯಾಪ್ತಿಯಲ್ಲಿ ಯಾವುದೇ ಅಪರಾಧ ಬಗ್ಗೆ ತನಿಖೆ ನಡೆಸುವುದಿದ್ದರೂ ಸೆಕ್ಷನ್ 361 ಪ್ರಕಾರ ರಾಜ್ಯಪಾಲರ ಅನುಮತಿ ಬೇಕಿರುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಕಾನೂನು ತಜ್ಞರ ಮೊರೆ ಹೋಗಲು ಪೊಲೀಸರು ನಿರ್ಧರಿಸಿದ್ದಾರೆ.
ಇದೇ ವೇಳೆ, ರಾಜಭವನದಿಂದ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು ಸತ್ಯ ಸತ್ಯವೇ ಆಗಿರುತ್ತದೆ. ಸುಳ್ಳಿನ ಕಂತೆಯ ಆರೋಪಗಳನ್ನು ನಿರಾಕರಿಸುತ್ತೇನೆ. ಯಾರಾದ್ರೂ ನನ್ನ ತೇಜೋವಧೆ ಮಾಡುವ ಮೂಲಕ ರಾಜಕೀಯ ಲಾಭದ ಆಸೆ ಇಟ್ಟುಕೊಂಡಿದ್ದರೆ ದೇವರು ಒಳ್ಳೆದು ಮಾಡಲಿ. ಆದರೆ ಭ್ರಷ್ಟಾಚಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಹಿಂಸೆಯನ್ನು ತಡೆಯುವ ನನ್ನ ಹೋರಾಟವನ್ನು ನಿಲ್ಲಿಸಲಾಗದು ಎಂದು ರಾಜ್ಯಪಾಲರು ಪ್ರತಿಕ್ರಿಯಿಸಿದ್ದಾರೆ. ಇದಲ್ಲದೆ, ರಾಜಭವನದ ನೌಕರರು ಹೇಳಿಕೆ ನೀಡಿದ್ದು, ಇಬ್ಬರು ಮಹಿಳೆಯರ ದೂರಿನಲ್ಲಿ ರಾಜಕೀಯ ಲಾಭದ ವಾಸನೆ ಇದೆ. ಅವರು ರಾಜಕೀಯ ಪಕ್ಷಗಳ ಏಜೆಂಟರು ಎಂದಿದ್ದಾರೆ. ಇದೇ ಸಂದರ್ಭದಲ್ಲಿ ರಾಜಭವನಕ್ಕೆ ಪೊಲೀಸರ ಪ್ರವೇಶವನ್ನು ನಿರ್ಬಂಧಿಸಿ ರಾಜ್ಯಪಾಲರು ಆದೇಶ ಮಾಡಿದ್ದಾರೆ.
A Raj Bhavan employee complained of molestation against state governor C V Ananda Bose on Thursday evening, introducing an element of the unprecedented in Bengal politics and pitting the Trinamool government and the governor's office in direct conflict in the middle of a seven-phase election season.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am