ಬ್ರೇಕಿಂಗ್ ನ್ಯೂಸ್
04-05-24 03:27 pm HK News Desk ದೇಶ - ವಿದೇಶ
ನವದೆಹಲಿ, ಮೇ.4: ಸೂರತ್ ಮತ್ತು ಇಂದೋರ್ ನಂತರ ಒಡಿಶಾದ ಪುರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸಿಗೆ ಭಾರಿ ಶಾಕ್ ಉಂಟಾಗಿದೆ. ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ಪಕ್ಷ ಹಣ ನೀಡಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತ ಅವರು ಟಿಕೆಟ್ ವಾಪಸ್ ನೀಡಿದ್ದು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸಂಭಿತ್ ಪಾತ್ರಾ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿ ಹಾದಿ ಸುಲಭವಾಗಿದೆ.
ಇದಕ್ಕೂ ಮೊದಲು ಗುಜರಾತಿನ ಸೂರತ್ ಮತ್ತು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದರು. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಂತರ ಬಿಜೆಪಿ ಸೇರಿದ್ದರೆ, ಅತ್ತ ಸೂರತ್ನಲ್ಲಿ ಬೇರಾವುದೇ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಬಿಜೆಪಿ ಅಭ್ಯರ್ಥಿ ಜಯಶಾಲಿ ಎಂದು ಘೋಷಿಸಲಾಗಿತ್ತು.
ಸುಚರಿತ ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದಿದ್ದಾರೆ. ಹಣದ ಕೊರತೆಯಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ಗೆ ಹೊಡೆತ ಬಿದ್ದಿದೆ.
In a setback for Congress, its Puri Lok Sabha candidate Sucharita Mohanty has declined to contest, citing little financial support from the cash-strapped party.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm