ಬ್ರೇಕಿಂಗ್ ನ್ಯೂಸ್
04-05-24 03:27 pm HK News Desk ದೇಶ - ವಿದೇಶ
ನವದೆಹಲಿ, ಮೇ.4: ಸೂರತ್ ಮತ್ತು ಇಂದೋರ್ ನಂತರ ಒಡಿಶಾದ ಪುರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸಿಗೆ ಭಾರಿ ಶಾಕ್ ಉಂಟಾಗಿದೆ. ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ಪಕ್ಷ ಹಣ ನೀಡಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತ ಅವರು ಟಿಕೆಟ್ ವಾಪಸ್ ನೀಡಿದ್ದು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸಂಭಿತ್ ಪಾತ್ರಾ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿ ಹಾದಿ ಸುಲಭವಾಗಿದೆ.
ಇದಕ್ಕೂ ಮೊದಲು ಗುಜರಾತಿನ ಸೂರತ್ ಮತ್ತು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದರು. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಂತರ ಬಿಜೆಪಿ ಸೇರಿದ್ದರೆ, ಅತ್ತ ಸೂರತ್ನಲ್ಲಿ ಬೇರಾವುದೇ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಬಿಜೆಪಿ ಅಭ್ಯರ್ಥಿ ಜಯಶಾಲಿ ಎಂದು ಘೋಷಿಸಲಾಗಿತ್ತು.
ಸುಚರಿತ ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದಿದ್ದಾರೆ. ಹಣದ ಕೊರತೆಯಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ಗೆ ಹೊಡೆತ ಬಿದ್ದಿದೆ.
In a setback for Congress, its Puri Lok Sabha candidate Sucharita Mohanty has declined to contest, citing little financial support from the cash-strapped party.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm