ಬ್ರೇಕಿಂಗ್ ನ್ಯೂಸ್
06-05-24 09:31 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ.6: ಕನ್ಯಾಕುಮಾರಿ ಜಿಲ್ಲೆಯ ವೇಮೂರ್ ಬೀಚ್ ನಲ್ಲಿ ಈಜಲು ಹೋಗಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ದುರಂತ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿಗಳು ತಮಿಳುನಾಡಿನ ತಿರುಚಿರಾಪಳ್ಳಿಯವರಾಗಿದ್ದು, ಗೆಳೆಯನ ಮದುವೆಗಾಗಿ ಕನ್ಯಾಕುಮಾರಿಗೆ ತೆರಳಿದ್ದರು.
ಸೋಮವಾರ ಮಧ್ಯಾಹ್ನ ಕನ್ಯಾಕುಮಾರಿ ಬಳಿಯ ವೇಮೂರ್ ಬೀಚ್ ನಲ್ಲಿ ಎಂಟು ಮಂದಿ ಈಜಾಟಕ್ಕಿಳಿದಿದ್ದಾಗ ದುರಂತ ಸಂಭವಿಸಿದೆ. ಮೂವರನ್ನು ರಕ್ಷಣೆ ಮಾಡಲಾಗಿದ್ದು, ಒಬ್ಬನ ಸ್ಥಿತಿ ಗಂಭೀರ ಇದೆಯೆಂದು ಮಾಹಿತಿ ಇದೆ. ಕನ್ಯಾಕುಮಾರಿ ನಿವಾಸಿ ಸರ್ವದರ್ಶಿತ್(23), ದಿಂಡಿಗಲ್ ನಿವಾಸಿ ಪ್ರವೀಣ್ ಸ್ಯಾಮ್(23), ನೆಯ್ ವೇಲಿ ನಿವಾಸಿ ಗಾಯತ್ರಿ(25), ಆಂಧ್ರಪ್ರದೇಶ ಮೂಲದ ವೆಂಕಟೇಶ್ (24), ತಂಜಾವೂರು ನಿವಾಸಿ ಚಕ್ರವರ್ತಿ (23) ಮೃತರು.
ಭಾನುವಾರ ಇದೇ ವೇಮೂರು ಬೀಚ್ ನಲ್ಲಿ ಮೂವರು ನೀರುಪಾಲಾಗಿದ್ದರು. ಸಮುದ್ರದ ಅಲೆಗಳು ರಕ್ಕಸ ಗಾತ್ರ ತಾಳಿದ್ದರಿಂದ ಜನರ ಪ್ರವೇಶಕ್ಕೆ ಸೋಮವಾರ ನಿರ್ಬಂಧ ಹೇರಲಾಗಿತ್ತು. ಹಾಗಿದ್ದರೂ, ವೈದ್ಯಕೀಯ ವಿದ್ಯಾರ್ಥಿಗಳು ನೀರಾಟಕ್ಕಿಳಿದಿದ್ದು ಸ್ಥಳೀಯ ಮೀನುಗಾರರ ಎಚ್ಚರಿಕೆ ಲೆಕ್ಕಿಸದೆ ಸಾವು ಕಂಡಿದ್ದಾರೆ. ಮೂರು ದಿನಗಳಲ್ಲಿ ಎಂಟು ಮಂದಿ ಈ ಬೀಚ್ ನಲ್ಲಿ ಸಾವು ಕಂಡಂತಾಗಿದೆ. ಐವರು ವಿದ್ಯಾರ್ಥಿಗಳು ಕೂಡ ತಿರುಚ್ಚಿಯ ಎಸ್ ಆರ್ ಎಂ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕೆಲವೇ ವಾರಗಳಲ್ಲಿ ಮೆಡಿಕಲ್ ಮುಗಿಸಿ ಹೊರಬರುತ್ತಿದ್ದರು.
ಸೋಮವಾರ ಬೆಳಗ್ಗೆ ಅಲ್ಲಿಯೇ ಸಮೀಪದ ತಿರಪ್ಪರಪ್ಪು ಫಾಲ್ಸ್ ಗೆ ಇವರು ತೆರಳಿದ್ದರು. ಅಲ್ಲಿ ಸಾಕಷ್ಟು ನೀರಿಲ್ಲವೆಂದು ವೇಮೂರ್ ಬೀಚ್ ಗೆ ಬಂದಿದ್ದರು. ಆದರೆ ಮಧ್ಯಾಹ್ನ ಹೊತ್ತಿಗೆ ಹಠಾತ್ತಾಗಿ ಬಂದ ಬೃಹತ್ತಾಕಾರದ ಅಲೆಯೊಂದು ಇವರನ್ನು ಎಳೆದೊಯ್ದಿತ್ತು. ಕೂಡಲೇ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಹವಾಮಾನ ಇಲಾಖೆ, ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು ಏಳುವ ಮುನ್ಸೂಚನೆ ನೀಡಿದ್ದು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
Five students of a private medical college in Tamil Nadu’s Trichy, who went to Nagercoil to attend a wedding, drowned in the sea off the Rajakkamangalam Lemur Beach on Monday morning.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm