ಬ್ರೇಕಿಂಗ್ ನ್ಯೂಸ್
06-05-24 09:31 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ.6: ಕನ್ಯಾಕುಮಾರಿ ಜಿಲ್ಲೆಯ ವೇಮೂರ್ ಬೀಚ್ ನಲ್ಲಿ ಈಜಲು ಹೋಗಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ದುರಂತ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿಗಳು ತಮಿಳುನಾಡಿನ ತಿರುಚಿರಾಪಳ್ಳಿಯವರಾಗಿದ್ದು, ಗೆಳೆಯನ ಮದುವೆಗಾಗಿ ಕನ್ಯಾಕುಮಾರಿಗೆ ತೆರಳಿದ್ದರು.
ಸೋಮವಾರ ಮಧ್ಯಾಹ್ನ ಕನ್ಯಾಕುಮಾರಿ ಬಳಿಯ ವೇಮೂರ್ ಬೀಚ್ ನಲ್ಲಿ ಎಂಟು ಮಂದಿ ಈಜಾಟಕ್ಕಿಳಿದಿದ್ದಾಗ ದುರಂತ ಸಂಭವಿಸಿದೆ. ಮೂವರನ್ನು ರಕ್ಷಣೆ ಮಾಡಲಾಗಿದ್ದು, ಒಬ್ಬನ ಸ್ಥಿತಿ ಗಂಭೀರ ಇದೆಯೆಂದು ಮಾಹಿತಿ ಇದೆ. ಕನ್ಯಾಕುಮಾರಿ ನಿವಾಸಿ ಸರ್ವದರ್ಶಿತ್(23), ದಿಂಡಿಗಲ್ ನಿವಾಸಿ ಪ್ರವೀಣ್ ಸ್ಯಾಮ್(23), ನೆಯ್ ವೇಲಿ ನಿವಾಸಿ ಗಾಯತ್ರಿ(25), ಆಂಧ್ರಪ್ರದೇಶ ಮೂಲದ ವೆಂಕಟೇಶ್ (24), ತಂಜಾವೂರು ನಿವಾಸಿ ಚಕ್ರವರ್ತಿ (23) ಮೃತರು.
ಭಾನುವಾರ ಇದೇ ವೇಮೂರು ಬೀಚ್ ನಲ್ಲಿ ಮೂವರು ನೀರುಪಾಲಾಗಿದ್ದರು. ಸಮುದ್ರದ ಅಲೆಗಳು ರಕ್ಕಸ ಗಾತ್ರ ತಾಳಿದ್ದರಿಂದ ಜನರ ಪ್ರವೇಶಕ್ಕೆ ಸೋಮವಾರ ನಿರ್ಬಂಧ ಹೇರಲಾಗಿತ್ತು. ಹಾಗಿದ್ದರೂ, ವೈದ್ಯಕೀಯ ವಿದ್ಯಾರ್ಥಿಗಳು ನೀರಾಟಕ್ಕಿಳಿದಿದ್ದು ಸ್ಥಳೀಯ ಮೀನುಗಾರರ ಎಚ್ಚರಿಕೆ ಲೆಕ್ಕಿಸದೆ ಸಾವು ಕಂಡಿದ್ದಾರೆ. ಮೂರು ದಿನಗಳಲ್ಲಿ ಎಂಟು ಮಂದಿ ಈ ಬೀಚ್ ನಲ್ಲಿ ಸಾವು ಕಂಡಂತಾಗಿದೆ. ಐವರು ವಿದ್ಯಾರ್ಥಿಗಳು ಕೂಡ ತಿರುಚ್ಚಿಯ ಎಸ್ ಆರ್ ಎಂ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕೆಲವೇ ವಾರಗಳಲ್ಲಿ ಮೆಡಿಕಲ್ ಮುಗಿಸಿ ಹೊರಬರುತ್ತಿದ್ದರು.
ಸೋಮವಾರ ಬೆಳಗ್ಗೆ ಅಲ್ಲಿಯೇ ಸಮೀಪದ ತಿರಪ್ಪರಪ್ಪು ಫಾಲ್ಸ್ ಗೆ ಇವರು ತೆರಳಿದ್ದರು. ಅಲ್ಲಿ ಸಾಕಷ್ಟು ನೀರಿಲ್ಲವೆಂದು ವೇಮೂರ್ ಬೀಚ್ ಗೆ ಬಂದಿದ್ದರು. ಆದರೆ ಮಧ್ಯಾಹ್ನ ಹೊತ್ತಿಗೆ ಹಠಾತ್ತಾಗಿ ಬಂದ ಬೃಹತ್ತಾಕಾರದ ಅಲೆಯೊಂದು ಇವರನ್ನು ಎಳೆದೊಯ್ದಿತ್ತು. ಕೂಡಲೇ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಹವಾಮಾನ ಇಲಾಖೆ, ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು ಏಳುವ ಮುನ್ಸೂಚನೆ ನೀಡಿದ್ದು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
Five students of a private medical college in Tamil Nadu’s Trichy, who went to Nagercoil to attend a wedding, drowned in the sea off the Rajakkamangalam Lemur Beach on Monday morning.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm