ಬ್ರೇಕಿಂಗ್ ನ್ಯೂಸ್
13-05-24 07:56 pm HK News Desk ದೇಶ - ವಿದೇಶ
ವಾರಾಣಸಿ, ಮೇ 13: ಬಿಹಾರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮುಗಿಸಿ ವಾರಾಣಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ಶೋ ನಡೆಸಿದರು. ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ಶೋ ನಡೆಸಿರುವ ಮೋದಿಗೆ ಅಪಾರ ಜನ ಬೆಂಬಲ ವ್ಯಕ್ತವಾಗಿದೆ. ರೋಡ್ಶೋ ಆರಂಭದಲ್ಲಿ ಅವರು ಪಂಡಿತ್ ಮದನ್ ಮೋಹನ್ ಮಾಳವಿಯಾ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ವಾರಾಣಸಿಯ ಹಾಲಿ ಸಂಸದರಾಗಿರುವ ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಇದೇ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.






ಸೋಮವಾರದ ರೋಡ್ಶೋನಲ್ಲಿ ಮೋದಿ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಥ್ ಕೊಟ್ಟರು. ಮೋದಿ ಅವರು ಸಾಗುವ ಹಾದಿಯುದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮೆರವಣಿಗೆಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಂಚೂಣಿಯಲ್ಲಿದ್ದರು. ಮರಾಠಿ, ಗುಜರಾತಿ, ತಮಿಳರು, ಬೆಂಗಾಲಿ, ಮಹೇಶ್ವರಿ, ಮಾರವಾಡಿಗಳು, ಪಂಜಾಬಿಗಳು ಸೇರಿದಂತೆ ಇತರೆ ಸಮುದಾಯದವರು ರೋಡ್ಶೋ ಉದ್ದಕ್ಕೂ 11 ವಲಯಗಳಲ್ಲಿ ಮೋದಿ ಅವರಿಗೆ ವಿಶೇಷ ಸ್ವಾಗತ ಕೋರಿದರು.

ಕಣ್ಣು ಹಾಯಿಸುವಷ್ಟು ದೂರದಲ್ಲೂ ಕೇಸರಿ ಧ್ವಜಗಳ, ಬಲೂನ್, ಬ್ಯಾನರ್ಗಳು ಕಾಣುತ್ತಿದ್ದವು. ವಾರಾಣಸಿಯ ಲಂಕಾ ಚೌಕದಿಂದ ಸುಮಾರು 6 ಕಿಲೋ ಮೀಟರ್ ದೂರದವರೆಗೂ ಮೋದಿ ರೋಡ್ಶೋ ನಡೆಸಿದರು. ವಾರಾಣಸಿಯಲ್ಲಿಯೇ ರಾತ್ರಿ ಉಳಿಯಲಿರುವ ಮೋದಿ, ಮಂಗಳವಾರ ಬೆಳಿಗ್ಗೆ ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪೂಜೆ ಸಲ್ಲಿಸ ಬಳಿಕ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ಜೂನ್ 1ರಂದು ಕೊನೆಯ ಹಂತದಲ್ಲಿ ಮತದಾನ ನಿಗದಿಯಾಗಿದೆ. ಮೋದಿ ಅವರು ವಾರಾಣಸಿಯಿಂದ ಎರಡು ಬಾರಿ ಗೆಲುವು ದಾಖಲಿಸಿದ್ದು ಮೂರನೇ ಬಾರಿಯೂ ಇಲ್ಲಿಂದಲೇ ಜನಾಭಿಪ್ರಾಯಕ್ಕೆ ಮುಂದಾಗಿದ್ದಾರೆ. ಕಣದಲ್ಲಿ ಕಾಂಗ್ರೆಸ್ನಿಂದ ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿದೆ.
The streets of Varanasi are set to witness a spectacle on Monday evening for a roadshow by Prime Minister Narendra Modi, who is poised to file his nomination for a third consecutive term from the parliamentary constituency, a day later.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm