ಬ್ರೇಕಿಂಗ್ ನ್ಯೂಸ್
20-05-24 11:35 am HK News Desk ದೇಶ - ವಿದೇಶ
ನವದೆಹಲಿ, ಮೇ.20: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಇಲಾಖೆ ಮಂತ್ರಿ ಹುಸೇನ್ ಅಮೀರಬ್ದುಲ್ಲಾ ಅವರು ಹೆಲಿಕಾಪ್ಟರ್ ದುರಂತದಲ್ಲಿ ದುರಂತ ಸಾವಿಗೀಡಾಗಿದ್ದಾರೆ.
ಭಾನುವಾರ ಸಂಜೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅರಣ್ಯ ಭಾಗದಲ್ಲಿ ಪತನಗೊಂಡಿದ್ದ ಬಗ್ಗೆ ಇರಾನ್ ದೇಶದ ಅಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ, ಯಾರು ಬದುಕಿದ್ದಾರೆ, ಅಧ್ಯಕ್ಷ ಇಬ್ರಾಹಿಂ ರೈಸಿ ಸ್ಥಿತಿ ಹೇಗಿದೆ ಎಂದು ಮಾಹಿತಿ ಇರಲಿಲ್ಲ. ರಾತ್ರಿಯಾಗಿದ್ದರಿಂದ ಕಾರ್ಯಾಚರಣೆ ಮತ್ತು ಆ ಜಾಗಕ್ಕೆ ತಲುಪುವುದು ಸಾಧ್ಯವಾಗಿರಲಿಲ್ಲ. ಸೋಮವಾರ ಬೆಳಗ್ಗೆ ಹೆಲಿಕಾಪ್ಟರಿನಲ್ಲಿದ್ದ ಎಲ್ಲರೂ ಸಾವಿಗೀಡಾಗಿದ್ದಾರೆ. ಹೆಲಿಕಾಪ್ಟರ್ ಪೂರ್ತಿ ಸುಟ್ಟು ಹೋಗಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದುರಂತಕ್ಕೂ ಮುನ್ನ ಇಬ್ರಾಹಿಂ ರೈಸಿ ಅವರು ಹೆಲಿಕಾಪ್ಟರಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಫೋಟೋ ವೈರಲ್ ಆಗಿದೆ. ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪ್ರಯಾಣಿಸುತ್ತಿದ್ದಾಗಿನ ಫೋಟೋ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಪಶ್ಚಿಮ ಅಜರ್ ಬೈಜಾನ್ ಪ್ರದೇಶದ ಜೋಲ್ಫಾ ಪ್ರಾಂತದಲ್ಲಿ ಹೆಲಿಕಾಪ್ಟರ್ ಪ್ರಯಾಣಿಸುತ್ತಿದ್ದಾಗಿನ ಚಿತ್ರ ಎಂದು ಹೇಳಲಾಗುತ್ತಿದೆ. ಅಮೆರಿಕದಿಂದ ಖರೀದಿಸಿದ್ದ ಹತ್ತು ವರ್ಷ ಹಳೆಯ ಮಾದರಿಯ ಬೆಲ್ 212 ಹೆಲಿಕಾಪ್ಟರ್ ಇದಾಗಿದ್ದು, ಅಸುರಕ್ಷತೆಯಿಂದ ಕೂಡಿತ್ತು ಎಂದು ಬಿಬಿಸಿ ವರದಿ ಮಾಡಿದೆ.
ಹೆಲಿಕಾಪ್ಟರ್ ನಲ್ಲಿ ಇಬ್ರಾಹಿಂ ರೈಸಿ ಸೇರಿದಂತೆ 9 ಮಂದಿ ಇದ್ದರು. ಮೂವರು ಇರಾನ್ ದೇಶದ ಅಧಿಕಾರಿಗಳು ಹಾಗೂ ಒಬ್ಬರು ಇಮಾಮ್ ಇದ್ದರು ಎನ್ನುವ ಮಾಹಿತಿ ಇದೆ. ಘಟನೆ ನಡೆದಿರುವ ಪಶ್ಚಿಮ ಅಜರ್ ಬೈಜಾನ್ ಪ್ರದೇಶದಲ್ಲಿ ಮಂಜು ಮುಸುಕಿದ ಮತ್ತು ಶೀತ ವಾತಾವರಣ ಇದೆ. ಹೀಗಾಗಿ ದುರಂತ ನಡೆದಿರುವ ಜಾಗಕ್ಕೆ ರಕ್ಷಣಾ ತಂಡ ತೆರಳಲು ಸಾಧ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಟರ್ಕಿಯ ಡ್ರೋಣ್ ಮತ್ತು ರಷ್ಯಾ ಸ್ಪೆಷಲ್ ಹೆಲಿಕಾಪ್ಟರ್ ಕಳಿಸಿಕೊಟ್ಟಿದೆ. ಅಲ್ಲದೆ, 50 ಮಂದಿ ವಿಶೇಷ ಪರಿಣತಿಯ ಯೋಧರನ್ನು ಕಳಿಸಲು ರಷ್ಯಾ ಏರ್ಪಾಡು ಮಾಡಿದೆ. ಇನ್ನೆರಡು ಹೆಲಿಕಾಪ್ಟರ್ ಕಳಿಸಿಕೊಡಲಾಗುವುದು. ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹೇಳಿದ್ದಾರೆ.
ಇತ್ತೀಚೆಗೆ ಇಸ್ರೇಲ್ ಮೇಲೆ ಪರಮಾಣು ದಾಳಿಗೂ ನಾವು ತಯಾರಿ ನಡೆಸಿದ್ದೇವೆ ಎಂದು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೇಳಿದ್ದರು. ಇಸ್ರೇಲ್ ಮೇಲೆ ಆಗಿಂದಾಗ್ಗೆ ದಾಳಿ ಘಟನೆಗಳು ನಡೆಯುತ್ತಿರುವಾಗಲೇ ಇರಾನ್ ಅಧ್ಯಕ್ಷ ದುರಂತ ಸಾವಿಗೀಡಾಗಿದ್ದಾರೆ.
Iran President Ebrahim Raisi helicopter crash: Iranian state media confirmed Ebrahim Raisi died in the chopper crash. He along with Iranian Foreign Minister Hossein Amirabdollhian and other senior officials have all died in the incident that happened on Sunday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm