ಬ್ರೇಕಿಂಗ್ ನ್ಯೂಸ್
23-05-24 08:49 pm HK NEWS ದೇಶ - ವಿದೇಶ
ನವದೆಹಲಿ, ಮೇ 23 ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧ ಸಂದರ್ಭದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಕೂಡಲೇ ಆರೋಪಿಗಳನ್ನು ಜೈಲಿಗೆ ತಳ್ಳುವಂತೆ ಆದೇಶ ಮಾಡಿದೆ.
ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಲು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಕಳೆದ ವರ್ಷ ಅಕ್ಟೋಬರ್ 19 ರಂದು ಹೈಕೋರ್ಟ್ನಿಂದ ಜಾಮೀನು ಪಡೆದ ಆರೋಪಿಗಳಿಗೆ ತಕ್ಷಣವೇ ಶರಣಾಗಿ ಜೈಲಿಗೆ ಹೋಗುವಂತೆ ಸೂಚಿಸಿದೆ.
ಭಯೋತ್ಪಾದನೆಗೆ ಸಂಬಂಧಿಸಿದ ಯಾವುದೇ ಕೃತ್ಯವನ್ನು ಲಘುವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಿಎಫ್ಐ ಸಂಘಟನೆಯ ಪ್ರಮುಖರಿಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ಈ ತೀರ್ಪು ನೀಡಿದೆ.
ಪಿಎಫ್ಐ ಸಂಘಟನೆ ನಿಷೇಧ ಸಂದರ್ಭದಲ್ಲಿ ತಮಿಳುನಾಡು ಘಟಕದಲ್ಲಿ ಪ್ರಮುಖರಾಗಿದ್ದ ಬರ್ಕತುಲ್ಲಾ, ಇದ್ರಿಸ್, ಮೊಹಮ್ಮದ್ ಅಬುತಾಹಿರ್, ಖಾಲಿದ್ ಮೊಹಮ್ಮದ್, ಸಯೀದ್ ಇಶಾಕ್, ಖ್ವಾಜಾ ಮೊಹಿದಿನ್, ಯಾಸಿರ್ ಅರಾಫತ್ ಮತ್ತು ಫಯೇಜ್ ಅಹ್ಮದ್ ಅವರಿಗೆ ನೀಡಿದ್ದ ಜಾಮೀನನ್ನು ಈಗ ರದ್ದುಪಡಿಸಲಾಗಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಿಎಫ್ಐ ನಿಷೇಧ ಬೆನ್ನಲ್ಲೇ ಇವರನ್ನು ಬಂಧಿಸಲಾಗಿತ್ತು.
ಪಿಎಫ್ಐ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಯಾಗಿದ್ದು ಭಾರತದಲ್ಲಿ ಮುಸ್ಲಿಂ ಆಡಳಿತ ಸ್ಥಾಪಿಸಲು ಯೋಜನೆ ಹಾಕಿದೆ. ಷರಿಯಾ ಕಾನೂನು ಜಾರಿಗೊಳಿಸಿ ದೇಶವನ್ನು ಆಳಬೇಕೆಂಬ ಗುರಿಯನ್ನು ಪೂರೈಸಲು ಸ್ಥಾಪಿಸಲಾಗಿದೆ ಎಂದು ಎನ್ಐಎ ತನ್ನ ಅರ್ಜಿಯಲ್ಲಿ ಹೇಳಿಕೊಂಡಿತ್ತು.
The Supreme Court Wednesday faulted the “lenient view” taken by the Madras High Court in granting bail to eight members of the banned outfit Popular Front of India (PFI) and set aside its seven-month-old decision to set them free.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm