ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.
ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm