ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.



ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm