ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.



ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm