ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.



ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm