ಬ್ರೇಕಿಂಗ್ ನ್ಯೂಸ್
28-05-24 01:09 pm HK News Desk ದೇಶ - ವಿದೇಶ
ಮುಂಬೈ, ಮೇ.28: ಪುಣೆಯಲ್ಲಿ ಅಪ್ರಾಪ್ತ ಚಲಾಯಿಸುತ್ತಿದ್ದ ಪೋರ್ಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಾರು ಅಪಘಾತ ಮಾಡಿದ ಅಪ್ರಾಪ್ತನ ರಕ್ತದ ಮಾದರಿ ರಿಪೋರ್ಟ್ ಬದಲಾಯಿಸಲು ಆತನ ಕುಟುಂಬಸ್ಥರು 3 ಲಕ್ಷ ರೂ. ಲಂಚ ಕೊಟ್ಟಿದ್ದ ಪ್ರಕರಣ ಈಗ ಬೆಳಕಿಗೆ ಬಂದಿದೆ.
ಪುಣೆ ಪೋರ್ಶೆ ಕಾರ್ ಅಪಘಾತ ಪ್ರಕರಣದಲ್ಲಿ 17 ವಯಸ್ಸಿನ ಆರೋಪಿಯ ರಕ್ತ ಪರೀಕ್ಷೆಯ ವರದಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಇಬ್ಬರು ವೈದ್ಯರೊಂದಿಗೆ ನಿನ್ನ ಪ್ಯೂನ್ ಬಂದಿತನಾಗಿದ್ದ. ಈತ ವೈದ್ಯರಿಗೆ 3 ಲಕ್ಷ ರೂ. ಲಂಚ ನೀಡಿದ್ದಾನೆ ಎಂದು ಗೊತ್ತಾಗಿದೆ.
ಅತುಲ್ ಘಟಕಾಂಬಳೆ ಎಂಬ ಪ್ಯೂನ್ ಮಧ್ಯವರ್ತಿಯಾಗಿ, ಅಪ್ರಾಪ್ತನ ಕುಟುಂಬದಿಂದ ಇಬ್ಬರು ವೈದ್ಯರಿಗೆ 3 ಲಕ್ಷ ರೂ. ಲಂಚವನ್ನು ಸಂಗ್ರಹಿಸಿದ್ದ. ಸಸೂನ್ ಆಸ್ಪತ್ರೆಯ ಡಾ. ಅಜಯ್ ತವಾಡೆ ಮತ್ತು ಡಾ. ಹರಿ ಹಾರ್ನರ್ ಎಂಬ ಕಂತ್ರಿಗಳನ್ನ ಪುಣೆ ಕ್ರೈಂ ಬ್ರಾಂಚ್ ನಿನ್ನೆ ಬಂಧಿಸಿದೆ.
ತನಿಖೆಯಿಂದ ಡಾ. ತವಡೆ ಮತ್ತು ಹದಿಹರೆಯದ ಆರೋಪಿಯ ತಂದೆ ಅಪಘಾತದ ದಿನ ಫೋನ್ನಲ್ಲಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಬಾಲಾಪರಾಧಿಯ ತಂದೆ ವೈದ್ಯರಿಗೆ ಕರೆ ಮಾಡಿ ರಕ್ತದ ಮಾದರಿ ರಿಪೋರ್ಟ್ ಬದಲಿಸಲು ಆಮಿಷ ಒಡ್ಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಸಂಗ್ರಹಿಸಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿರುವ ಮಾದರಿಗಳು ಬಾಲಾಪರಾಧಿಗಳದ್ದಲ್ಲ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದರು. ಮೇ 19 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ, ಸ್ಯಾಸೂನ್ ಆಸ್ಪತ್ರೆಯಲ್ಲಿ ತೆಗೆದ ಅಪ್ರಾಪ್ತನ ರಕ್ತದ ಮಾದರಿಯನ್ನು ಡಸ್ಟ್ಬಿನ್ಗೆ ಎಸೆಯಲಾಯಿತು. ಇನ್ನೊಬ್ಬ ವ್ಯಕ್ತಿಯ ರಕ್ತದ ಮಾದರಿಯನ್ನು ತೆಗೆದುಕೊಂಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಅಪ್ರಾಪ್ತರ ರಕ್ತದ ಮಾದರಿಗಳನ್ನು ಬದಲಾಯಿಸಲಾಗಿದ್ದು, ಭಾನುವಾರ ಬಂದ ವರದಿಯಲ್ಲಿ ಮದ್ಯದ ಯಾವುದೇ ಕುರುಹು ಕಂಡುಬಂದಿಲ್ಲ. ಆದರೆ ಆ ರಾತ್ರಿ ಆತ ಭೇಟಿ ನೀಡಿದ ಬಾರ್ ಒಂದರ ಸಿಸಿಟಿವಿ ದೃಶ್ಯಾವಳಿಯಲ್ಲಿ ಆತ ಸ್ನೇಹಿತರೊಂದಿಗೆ ಮದ್ಯಪಾನ ಮಾಡುತ್ತಿರುವುದು ಕಂಡುಬಂದಿದೆ.
The Pune crime branch on Monday arrested three people, including the doctor who heads the Sassoon General Hospital’s forensics department and a doctor in its casualty medical department, for allegedly destroying evidence and switching the blood sample of the 17-year old son of a real estate developer who is in custody for causing the deaths of two techies by crashing his Porsche into their motorcycle, while presumably drunk.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm