ಬ್ರೇಕಿಂಗ್ ನ್ಯೂಸ್
29-05-24 12:12 pm HK News Desk ದೇಶ - ವಿದೇಶ
ನವದೆಹಲಿ, ಮೇ 29: ಭಾರತದ ಜೊತೆ ಮಾಡಿಕೊಂಡಿದ್ದ 1999ರ ಲಾಹೋರ್ ಒಪ್ಪಂದವನ್ನು ಪಾಕಿಸ್ತಾನವೇ ಮುರಿದಿತ್ತು. ಅದು ನಮ್ಮ ಅತಿ ದೊಡ್ಡ ಪ್ರಮಾದ ಆಗಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಕಾರ್ಗಿಲ್ ಯುದ್ಧ ಜನರಲ್ ಫರ್ವೇಜ್ ಮುಷರಫ್ ಅವರ ಕುಕೃತ್ಯವಾಗಿತ್ತು ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.
ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ಪಕ್ಷದ ಸಭೆಯಲ್ಲಿ ಈ ಹೇಳಿಕೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ಮೇ 28, 1998 ರಂದು ಪಾಕಿಸ್ತಾನ ಐದು ಅಣು ಬಾಂಬ್ ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಅಂದಿನ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಲ್ಲಿಗೆ ಬಂದು ನಮ್ಮ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ನಾವು ಮಾತ್ರ ಆ ಒಪ್ಪಂದವನ್ನು ಮುರಿದಿದ್ದು ನಾವು ಮಾಡಿದ ಅತಿ ದೊಡ್ಡ ತಪ್ಪಾಗಿತ್ತು ಎಂದರು.
ಫೆಬ್ರವರಿ 21, 1999 ರಂದು ವೈರಿ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಭಾರತ ಲಾಹೋರ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ನೆರೆಹೊರ ರಾಷ್ಟ್ರಗಳ ನಡುವಿನ ಶಾಂತಿ ಒಪ್ಪಂದವು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಉತ್ತೇಜಿಸಿತ್ತು. ಆದರೆ, ಕೆಲವು ತಿಂಗಳಲ್ಲೇ ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಗಡಿಯಲ್ಲಿ ಪಾಕಿಸ್ತಾನದ ಸೇನೆ ಮಾಡಿದ್ದ ಆಕ್ರಮಣವು ಎರಡು ರಾಷ್ಟ್ರಗಳ ನಡುವೆ ಕಾರ್ಗಿಲ್ ಯುದ್ಧಕ್ಕೆ ಕಾರಣವಾಗಿತ್ತು.
ಅಂದು ಪಾಕಿಸ್ತಾನ ಸೇನೆಯ ಜನರಲ್ ಆಗಿದ್ದ ಮುಷರಫ್ ದೇಶದ ಆಡಳಿತವನ್ನು ಕೈಗೆ ತೆಗೆದುಕೊಂಡು, ಕಾರ್ಗಿಲ್ ಮೂಲಕ ಪಾಕ್ ಸೇನೆಯನ್ನು ನುಗ್ಗಿಸಿ ಶಾಂತಿ ಒಪ್ಪಂದವನ್ನು ಮುರಿದಿದ್ದರು. ಆನಂತರ, ಭಾರತದ ಸೈನಿಕರು ಪ್ರತಿ ದಾಳಿ ನಡೆಸಿ ಯುದ್ಧವನ್ನು ಗೆದ್ದಿದ್ದರು. ಈ ಸಂರ್ಭದಲ್ಲಿ ನವಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿ ಆಗಿದ್ದರೂ ಅಧಿಕಾರದ ನಿಯಂತ್ರಣ ಮುಷರಫ್ ಕೈಲಿತ್ತು. ಈಗ ಪಾಕಿಸ್ತಾನದಲ್ಲಿ ಆರ್ಥಿಕತೆ ಪಾತಾಳಕ್ಕೆ ಹೋಗಿದ್ದು ಕೆಲವು ನಾಯಕರು ಭಾರತದ ಸ್ನೇಹ ಮುರಿದುಕೊಂಡಿದ್ದೇ ಆಪತ್ತಿಗೆ ಕಾರಣವಾಯಿತು ಎಂದು ಹೇಳುತ್ತಿರುವಾಗಲೇ ಹಳೆಯ ಪ್ರಮಾದವನ್ನು ಹೇಳಿಕೊಂಡು ನವಾಜ್ ಷರೀಫ್ ಹಲುಬಿದ್ದಾರೆ.
Pakistan's former Prime Minister Nawaz Sharif admitted on Tuesday that the country had "violated" the 1999 Lahore Declaration agreement with India, which was signed by him and then Indian Prime Minister Atal Bihari Vajpayee. Indirectly referring to the Kargil misadventure by General Pervez Musharraf, he said, "It was our fault."
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm