ಬ್ರೇಕಿಂಗ್ ನ್ಯೂಸ್
30-05-24 10:01 pm HK News Desk ದೇಶ - ವಿದೇಶ
ಇಂದೋರ್, ಮೇ 30: ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ನಡುವಿನ ವಿವಾಹವು ಮುಸ್ಲಿಂ ವೈಯಕ್ತಿಕ ಕಾನೂನು ಪ್ರಕಾರ ಕಾನೂನು ಸಮ್ಮತವಲ್ಲ. ಇವರು ಸ್ಪೆಷಲ್ ಮ್ಯಾರೇಜ್ ಏಕ್ಟ್ ನಡಿ ಮದುವೆಯಾದರೂ ಕಾನೂನು ರೀತಿ ಸಿಂಧುವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಜಡ್ಜ್ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ ಅವರು ಈ ತೀರ್ಪು ನೀಡಿದ್ದಾರೆ. ಸ್ಪೆಷಲ್ ಮ್ಯಾರೇಜ್ ಏಕ್ಟ್ -1954 ಪ್ರಕಾರ ಮದುವೆ ರಿಜಿಸ್ಟರ್ ಆಗಿದ್ದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಮದುವೆಗೆ ಪೊಲೀಸ್ ರಕ್ಷಣೆ ಕೊಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಮುಸ್ಲಿಂ ವೈಯಕ್ತಿಕ ಕಾನೂನು ಪ್ರಕಾರ, ಮುಸ್ಲಿಂ ಹುಡುಗನೊಬ್ಬ, ವಿಗ್ರಹಾರಾಧನೆ ಮಾಡುವ ಯುವತಿಯನ್ನು ಮದುವೆಯಾಗುವುದು ಕಾನೂನು ಸಮ್ಮತವಲ್ಲ. ವಿಶೇಷ ವಿವಾಹ ಕಾಯ್ದೆಯಡಿ ನೋಂದಣಿ ಮಾಡಿಕೊಂಡರೂ ಅದು ಹೆಚ್ಚು ಕಾಲ ಊರ್ಜಿತವಾಗಿರುವುದಿಲ್ಲ. ಅದು ಅಸಿಂಧುವೇ ಆಗಿರುತ್ತದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಅಂತರ್ ಧರ್ಮೀಯ ಮದುವೆಗಳಿಗೆ ಮಾನ್ಯತೆ ನೀಡಬಾರದು, ಅದರಿಂದ ಸಮಾಜದಲ್ಲಿ ಅಗೌರವ ಎದುರಿಸಬೇಕಾಗುತ್ತದೆ ಎಂದು ಯುವತಿ ಮನೆಯವರು ವಾದಿಸಿದ್ದರು.
ಆದರೆ ಹುಡುಗನ ಕಡೆಯವರು ವಿಶೇಷ ವಿವಾಹ ಕಾಯ್ದೆಯಡಿ ಮದುವೆಗೆ ಅವಕಾಶ ಕೊಡಬೇಕು. ನಮಗೆ ಪೊಲೀಸರ ರಕ್ಷಣೆ ಕೊಡಬೇಕು. ಮದುವೆಯ ಬಳಿಕ ಯುವತಿ ಕೋರಿಕೆಯಂತೆ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುವುದಿಲ್ಲ ಎಂದು ವಾದಿಸಿದ್ದರು. ಅಲ್ಲದೆ, ಅಂತರ್ ಧರ್ಮೀಯ ವಿವಾಹ ನೋಂದಣಿಗೆ ವಿಶೇಷ ವಿವಾಹ ಕಾಯ್ದೆಯಡಿ ಅವಕಾಶ ಇದೆ ಎಂದು ವಾದ ಮಂಡಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್, ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ನಿಷೇಧ ಇರುವುದನ್ನು ವಿಶೇಷ ವಿವಾಹ ಕಾಯ್ದೆಯಡಿ ಅನುಮತಿಸಲು ಸಾಧ್ಯವಾಗುವುದಿಲ್ಲ. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 ಪ್ರಕಾರ, ಎರಡು ಪಾರ್ಟಿಗಳ ಮಧ್ಯೆ ನಿಷೇಧಿತವಲ್ಲದ ಸಂಬಂಧ ಏರ್ಪಡುವುದಿದ್ದರೆ ಮಾತ್ರ ವಿವಾಹಕ್ಕೆ ಅನುಮತಿಸುತ್ತದೆ. ಹೀಗಾಗಿ ಒಂದೋ ನೀವು ನಿಮ್ಮ ಧರ್ಮವನ್ನು ಬದಲಿಸಿಕೊಂಡು ಮದುವೆ ಆಗಬೇಕು, ಇಲ್ಲವೇ ಲೀವ್ ಇನ್ ರಿಲೇಶನ್ ಇರಬೇಕಾಗುತ್ತದೆ ಎಂದು ಹೇಳಿ ಹುಡುಗನ ಕಡೆಯ ಅರ್ಜಿಯನ್ನು ವಜಾ ಮಾಡಿದೆ.
The Madhya Pradesh High Court has ruled that a marriage between a Muslim man and a Hindu woman was not valid under Muslim personal law. The court also dismissed a plea for police protection to register an inter-faith marriage under the Special Marriage Act, 1954.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am