ಬ್ರೇಕಿಂಗ್ ನ್ಯೂಸ್
02-06-24 07:39 pm HK News Desk ದೇಶ - ವಿದೇಶ
ನವದೆಹಲಿ, ಜೂನ್.2: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿ ಮಧ್ಯಂತರ ಜಾಮೀನು ಪೂರ್ತಿಗೊಂಡ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಸಂಜೆ ತಿಹಾರ್ ಜೈಲಿಗೆ ಶರಣಾಗಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡಿತ್ತು. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಲು ಕೇಜ್ರಿವಾಲ್ ಗೆ ಷರತ್ತಿನ ಜಾಮೀನು ನೀಡಲಾಗಿತ್ತು. ಶರಣಾಗುವ ಮುನ್ನ ಕೇಜ್ರಿವಾಲ್ ಅವರು ರಾಜ್ ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಕನ್ನಾಟ್ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮೊದಲು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ, ''ನಾನು ಮತ್ತೆ ಜೈಲಿಗೆ ಹೋಗುತ್ತಿರುವುದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಅಲ್ಲ, ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದರಿಂದ ಜೈಲಿಗೆ ಹೋಗುತ್ತಿದ್ದೇನೆ. ನನಗೆ ಸುಪ್ರೀಂ ಕೋರ್ಟ್ 21 ದಿನಗಳ ಅವಕಾಶ ನೀಡಿತ್ತು. ಈ 21 ದಿನಗಳು ಅವಿಸ್ಮರಣೀಯ. ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ನಾನು ದೇಶವನ್ನು ಉಳಿಸಲು ಪ್ರಚಾರ ಮಾಡಿದ್ದೇನೆ. ಎಎಪಿಗಿಂತ ಮೊದಲು ನನಗೆ ನನ್ನ ದೇಶ ಮುಖ್ಯ ಎಂದು ಕೇಜ್ರಿವಾಲ್ ಹೇಳಿದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಿದ ಗದ್ದುಗೆ ಏರಲಿದೆ ಎಂಬ ಭವಿಷ್ಯ ನುಡಿಯುವ ಎಲ್ಲಾ ಎಕ್ಸಿಟ್ ಪೋಲ್ಗಳು "ನಕಲಿ" ಎಂದು ಕೇಜ್ರಿವಾಲ್ ಪ್ರತಿಪಾದಿಸಿದರು.
Delhi Chief Minister Arvind Kejriwal on Sunday surrender at the Tihar jail after 21 days interim bail granted to him by the Supreme Court to campaign for Lok Sabha elections ended.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am