ಬ್ರೇಕಿಂಗ್ ನ್ಯೂಸ್
04-06-24 04:27 pm HK News Desk ದೇಶ - ವಿದೇಶ
ಕೊಯಮತ್ತೂರು, ಜೂ.04: ಜನ್ಮದಿನದ ಸಂಭ್ರಮದಲ್ಲಿರುವ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಸೋಲಿನ ಆಘಾತ ಎದುರಾಗಿದೆ. ತಮಿಳುನಾಡಿನ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿತ್ತು. ಇಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ, ಡಿಎಂಕೆಯ ಗಣಪತಿ ರಾಜ್ಕುಮಾರ್ ಪಿ ಮತ್ತು ಎಐಎಡಿಎಂಕೆಯ ಸಿಂಗೈ ಜಿ ರಾಮಚಂದ್ರನ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
ಆರಂಭದ ಮತ ಎಣಿಕೆಯಲ್ಲಿ ಅಣ್ಣಾಮಲೈ ಮುನ್ನಡೆ ಪಡೆದಿದ್ದರಿಂದ ಅವರಿಂದ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ನಂತರದ ಸುತ್ತುಗಳಲ್ಲಿ ಎರಡನೇ ಸ್ಥಾನಕ್ಕೆ ಕುಸಿದ ಅವರು, ಡಿಎಂಕೆ ಅಭ್ಯರ್ಥಿಯನ್ನು ಹಿಂದಿಕ್ಕುವ ಯಾವುದೇ ಸೂಚನೆ ನೀಡಲಿಲ್ಲ. ಅಂತಿಮವಾಗಿ ಅಣ್ಣಾಮಲೈ ಅವರಿಗೆ ಹುಟ್ಟುಹಬ್ಬದಂದೇ ಸೋಲಿನ ಕಹಿ ಎದುರಾಗಿದೆ. ಸುಮಾರು 17 ಸಾವಿರ ಮತಗಳ ಅಂತರದಿಂದ ಅಣ್ಣಾಮಲೈ ಸೋಲು ಅನುಭವಿಸಿದ್ದಾರೆ.
ಆರಂಭದ ಸುತ್ತುಗಳಲ್ಲಿ ಡಿಎಂಕೆ ಅಭ್ಯರ್ಥಿ 12,841 ಮತಗಳನ್ನು ಪಡೆದಿದ್ದು, ಅಣ್ಣಾಮಲೈ ಅವರಿಗಿಂತ 3454 ಮತಗಳಿಂದ ಮುನ್ನಡೆ ಪಡೆದಿದ್ದರು. ಅಣ್ಣಾಮಲೈ ಅವರಿಗೆ 9387 ಮತಗಳು ದೊರಕಿದ್ದವು.
ಅವರು ಹಂತದ ಮತ ಎಣಿಕೆಯಲ್ಲಿ ಕೆ ಅಣ್ಣಾಮಲೈ ಮುನ್ನಡೆ ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆ ಮುಗಿದಾಗ ಡಿಎಂಕೆ ಮುನ್ನಡೆ ಸಾಧಿಸಿದೆ. ಡಿಎಂಕೆ 5127 ಮತಗಳು, ಬಿಜೆಪಿ 1852 ಮತಗಳು ಹಾಗೂ ಎಐಎಡಿಎಂಕೆ 1541 ಮತಗಳನ್ನು ಪಡೆದಿದ್ದವು.
ತಮಿಳುನಾಡಿನಲ್ಲಿ ಬಿಜೆಪಿಗೆ ಭದ್ರ ನೆಲೆ ಇಲ್ಲದಿದ್ದರೂ, ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಕೇಸರಿ ಪಕ್ಷ ಉತ್ತಮ ಬೆಂಬಲ ಹೊಂದಿದೆ. ಸಿಪಿಐಎಂ ಪಕ್ಷದ ಭದ್ರ ಕೋಟೆಯಾಗಿರುವ ಈ ಕ್ಷೇತ್ರದಲ್ಲಿ, ಬಿಜೆಪಿ ಕೂಡ ತನ್ನದೇ ಮತ ಬ್ಯಾಂಕ್ ಪಡೆದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸಿಪಿಎಂ ನಾಯಕ ಪಿ. ಆರ್. ನಟರಾಜನ್ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಜೆಪಿಯ ಸಿ. ಪಿ. ರಾಧಾಕೃಷ್ಣನ್ ಅವರು ಎರಡನೇ ಸ್ಥಾನ ಪಡೆದಿದ್ದರು. ಆದರೆ ಅವರು ಸರಿಸುಮಾರು 4 ಲಕ್ಷ ಮತಗಳನ್ನು ಗಳಿಸುವ ಮೂಲಕ ಭರ್ಜರಿ ಪೈಪೋಟಿಯನ್ನೇ ನೀಡಿದ್ದರು. ಹೀಗಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರು ಪ್ರಾಬಲ್ಯ ಸಾಧಿಸಬಹುದು ಎಂಬ ಕುತೂಹಲ ಮೂಡಿತ್ತು.
BJP state president K Annamalai is staring at defeat in Coimbatore as he is trailing behind DMK candidate Ganapathy P Rajkumar by 25,000 votes at the end of round 5 of the counting.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm