ಬ್ರೇಕಿಂಗ್ ನ್ಯೂಸ್
05-06-24 12:30 pm HK News Desk ದೇಶ - ವಿದೇಶ
ನವದೆಹಲಿ, ಜೂನ್.5: 400 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಎನ್ಡಿಎಗೆ ಈ ಬಾರಿ ಶಾಕ್ ಆಗಿದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಬಹುಮತ ಪಡೆದಿದ್ದ ಬಿಜೆಪಿ ಈ ಬಾರಿ 240 ಸ್ಥಾನ ಪಡೆಯುವಲ್ಲಿ ಸುಸ್ತು ಹೊಡೆದಿದೆ. ಎನ್ಡಿಎ ಮೈತ್ರಿ ಪಕ್ಷಗಳು ಸೇರಿಕೊಂಡರೂ ಬಹುಮತದ ಗೆರೆಯನ್ನಷ್ಟೇ ದಾಟಿ ನಿಂತಿವೆ. ಬಿಜೆಪಿಗೆ ಯಾವತ್ತೂ ಕೈಹಿಡೀತಿದ್ದ ಹಿಂದಿ ಹಾರ್ಟ್ ಲ್ಯಾಂಡ್ ಈ ಬಾರಿ ಶಾಕ್ ಕೊಟ್ಟಿದೆ.
3ನೇ ಬಾರಿಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಗದ್ದುಗೆ ಏರುವ ಅತಿ ಮಹತ್ವಾಕಾಂಕ್ಷೆಯಲ್ಲಿದ್ದ ಮೋದಿ ಪರಿವಾರ್ಗೆ ಮತದಾರನ ನಿರ್ಣಯ ಸ್ಪಷ್ಟ ಸಂದೇಶ ರವಾನಿಸಿದೆ. ನಂಬಿಕಸ್ಥ ರಾಜ್ಯಗಳಲ್ಲೇ ಮತದಾರರು ಬಿಜೆಪಿಗೆ ಸೋಲಿನ ರುಚಿ ಉಣಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ 353 ಸೀಟುಗಳನ್ನು ಗೆದ್ದಿದ್ದ ಎನ್ಡಿಎ ಕೂಟಕ್ಕೆ ಈ ಬಾರಿ 300ರ ಗಡಿ ದಾಟಲು ಸಾಧ್ಯವಾಗಿಲ್ಲ. 2014 ಹಾಗೂ 2019ರ ಚುನಾವಣೆಯಲ್ಲಿ ಹಿಂದಿ ಹಾರ್ಟ್ ಲ್ಯಾಂಡ್ಗಳು ಬಿಜೆಪಿ ಕೈ ಹಿಡಿದಿದ್ದು ದೊಡ್ಡ ಗೆಲುವಿಗೆ ಕಾರಣ ಆಗಿತ್ತು. 2019ರಲ್ಲಿ ಏಕಾಂಗಿಯಾಗಿಯೇ ಬಿಜೆಪಿ 303 ಸ್ಥಾನಗಳನ್ನ ಗೆದ್ದುಕೊಂಡಿತ್ತು. ಆದ್ರೆ ಈ ಬಾರಿ ಹಿಂದಿ ಭಾಷಿಕ ರಾಜ್ಯಗಳಲ್ಲೇ ಬಿಜೆಪಿ ಹೊಡೆತ ಅನುಭವಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಹರಿಯಾಣ, ಪಂಜಾಬ್ನಲ್ಲೂ ಬಿಜೆಪಿ ನಿರಾಸೆ ಅನುಭವಿಸಿದೆ. ಉತ್ತರ ಪ್ರದೇಶವೊಂದರಲ್ಲೇ ಬಿಜೆಪಿ 30 ಸೀಟುಗಳನ್ನ ಕಳೆದುಕೊಂಡಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್, ಇಂಡಿಯಾ ಒಕ್ಕೂಟದ ಅಭ್ಯರ್ಥಿ ಅವಧೇಶ್ ಪ್ರಸಾದ್ ಎದುರು ಸೋಲು ಕಂಡಿದ್ದಾರೆ. ಯುಪಿಯಲ್ಲಿ ಬಿಜೆಪಿ 33, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಾರ್ಟಿ 37, ಕಾಂಗ್ರೆಸ್ 6, ರಾಷ್ಟ್ರೀಯ ಲೋಕದಳ್ ಎರಡು ಸ್ಥಾನಗಳಲ್ಲಿ ಗೆದ್ದಿದೆ. ಹರ್ಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 5 ಸ್ಥಾನ ಪಡೆದಿದೆ. ಕಳೆದ ಬಾರಿ ಬಿಜೆಪಿ ಇಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು.
ರಾಜಸ್ಥಾನದಲ್ಲಿ ಬಿಜೆಪಿಗೆ 11 ಕ್ಷೇತ್ರಗಳು ಖೋತಾ!
25 ಲೋಕಸಭೆ ಕ್ಷೇತ್ರಗಳನ್ನು ಹೊಂದಿದ್ದ ರಾಜಸ್ಥಾನದಲ್ಲಿ ಬಿಜೆಪಿ ಈ ಬಾರಿ 14 ಕ್ಷೇತ್ರಗಳನ್ನಷ್ಟೇ ಗೆದ್ದಿದೆ. ಕಾಂಗ್ರೆಸ್ 8 ಹಾಗೂ ಇತರರು 3 ಸ್ಥಾನಗಳನ್ನು ಗಳಿಸಿದ್ದಾರೆ. 2019ರಲ್ಲಿ ಎಲ್ಲಾ 25 ಕ್ಷೇತ್ರಗಳನ್ನೂ ಬಿಜೆಪಿ ಗೆದ್ದು ದಾಖಲೆ ಬರೆದಿದ್ದ ಬಿಜೆಪಿ ರಾಜಸ್ಥಾನದಲ್ಲಿ 11 ಸ್ಥಾನಗಳನ್ನು ನಷ್ಟ ಅನುಭವಿಸಿದ್ದು ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಮತದಾರರು ಶಾಕ್ ನೀಡಿದ್ದಾರೆ. ಹಾಗೆ ನೋಡಿದರೆ ಹಿಂದಿ ಹಾರ್ಟ್ ಲ್ಯಾಂಡ್ ಮಧ್ಯಪ್ರದೇಶದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿರುವುದು ಕೇಸರಿ ಪಕ್ಷದ ದೊಡ್ಡ ಸಾಧನೆ.
ಮಹಾರಾಷ್ಟ್ರದಲ್ಲಿ ಅಘಾಡಿ ಎದುರು ಮಂಕಾದ ಮೈತ್ರಿ!
ಮಹಾರಾಷ್ಟ್ರದಲ್ಲಿಯೂ ಎನ್ಡಿಎ ಮೈತ್ರಿಕೂಟದ ಬಲ ಕುಗ್ಗಿದೆ. 48 ಕ್ಷೇತ್ರಗಳ ಪೈಕಿ 2019ರಲ್ಲಿ 41 ಸ್ಥಾನಗಳನ್ನು ಗೆದ್ದಿದ್ದ ಎನ್ಡಿಎ ಈ ಬಾರಿ 18 ಸ್ಥಾನಗಳನ್ನಷ್ಟೇ ಪಡೆದಿದೆ. ರಾಜ್ಯದಲ್ಲಿ ಬಿಜೆಪಿ - ಶಿವಸೇನೆ ಮೈತ್ರಿ ಸರ್ಕಾರ ಇದ್ದರೂ 23 ಸ್ಥಾನಗಳನ್ನು ಕಳಕೊಂಡಿದೆ. ಬಿಜೆಪಿ ಪ್ರಾಬಲ್ಯಕ್ಕೆ ದೊಡ್ಡ ಹೊಡೆತ ಕೊಟ್ಟಿರುವುದು ಮಹಾರಾಷ್ಟ್ರ. 28 ಸ್ಥಾನಗಳಲ್ಲಿ ಸ್ಪರ್ಧಿಸಿ 9 ಕಡೆ ಮಾತ್ರ ಗೆಲುವು ಪಡೆದಿದೆ. ಇಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ 17 ಸ್ಥಾನಗಳಲ್ಲಿ 13 ಕಡೆ ಗೆದ್ದಿದೆ. ಕಾಂಗ್ರೆಸಿಗೆ ಡಬಲ್ ಡಿಜಿಟ್ ಸಾಧನೆ ಮಾಡಿರುವುದು ಇಲ್ಲಿ ಮಾತ್ರ.
ಇತ್ತ ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್ ಮೈತ್ರಿಯೊಂದಿಗೆ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದ ಬಿಜೆಪಿ ನಿರಾಸೆ ಅನುಭವಿಸಿದೆ. ಕಳೆದ ಬಾರಿಗಿಂತ 7 ಸ್ಥಾನಗಳನ್ನು ಕಳೆದುಕೊಂಡಿದೆ. ಚಿಕ್ಕೋಡಿ, ಕಲಬುರಗಿ, ಬಳ್ಳಾರಿ, ಬೀದರ್ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸೋಲು ಕಂಡಿದೆ. ದಕ್ಷಿಣ ಭಾರತದ ಮಟ್ಟಿಗೆ ಭದ್ರನೆಲೆ ಹೊಂದಿರುವ ಬಿಜೆಪಿಗೆ ಕರ್ನಾಟಕದಲ್ಲೂ ಬಲ ಕುಗ್ಗಿದಂತಾಗಿದೆ. ಒಟ್ಟಾರೆ, ಅತಿಯಾದ ಆತ್ಮವಿಶ್ವಾಸವೇ ಬಿಜೆಪಿಗೆ ಹಿನ್ನಡೆ ಆಯ್ತಾ ಎಂಬ ಮಾತು ಕೇಳಿಬರ್ತಿದೆ.
Election result 2024, BJP faces huge defeat in major states of India, what was the reason. Indian Prime Minister Narendra Modi’s Bharatiya Janata Party (BJP) lost its national majority after suffering major losses in key states, marking a dramatic shift in a political landscape it has dominated for the past decade.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm